Advertisements
ಜೀ ಕನ್ನಡ ಚಾನೆಲ್

ಕಾಮಿಡಿ ಕಿಲಾಡಿಗಳು ಚಾಂಪಿಯನ್ ಶಿಪ್ ಸೀಜûನ್-2 ಪತ್ರಿಕಾ ಪ್ರಕಟಣೆ – ಜೀ ಕನ್ನಡ

ಜಾಹೀರಾತುಗಳು
Comedy Khiladigalu Championship Season 2 Finale

ವಿಭಿನ್ನತೆಗೆ ಹೆಸರಾದ ಜಿûೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮಗಳಲ್ಲಿ ಕಾಮಿಡಿ ಕಿಲಾಡಿಗಳು ಸಹ ಒಂದು. ನಿತ್ಯದ ಜಂಜಾಟದಲ್ಲಿ ಒದ್ದಾಡುವ ಅದೆμÉ್ಟೂೀ ಮನಸ್ಸುಗಳಿಗೆ ಹಾಸ್ಯದ ಮೂಲಕ ಸಾಂತ್ವನದ ಕಚಗುಳಿಯನ್ನಿಡುವ ಉದ್ದೇಶದಿಂದ ಹುಟ್ಟಿಕೊಂಡ ಮಹಾವೇದಿಕೆ ಕಾಮಿಡಿ ಕಿಲಾಡಿಗಳು. ಏನೇ ಇರ್ಲಿ ನಿಮ್ ಟೆನ್ಶನ್ಸು, ಇನ್ಮೇಲೆ ಎಲ್ಲಾ ಉಡೀಸು, ಯಾಕಂದ್ರೇ ಮತ್ತೇ ಬಂದ್ರು ನಮ್ಮ ಕಾಮಿಡಿ ಚಾಂಪಿಯನ್ಸು ಅನ್ನೋ ಸ್ಲೋಗನ್ ಮೂಲಕ ನಗ್ಸೋದೆ ನಮ್ಮ ಸಿದ್ದಾಂತ ಅಂತ ವಾರಪೂರ್ತಿ ತಯರಾಗಿ ವಾರಾಂತ್ಯದಲ್ಲಿ ಇಡೀ ಕರುನಾಡನ್ನೇ ನಗೆಗಡಲಲ್ಲಿ ತೇಲಿಸಿ, ಕನ್ನಡಿಗರ ಹೃದಯದಲ್ಲಿ ಪ್ರೀತಿಯ ಸ್ಥಾನ ಗಳಿಸಿಕೊಂಡ ಕೀರ್ತಿ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮಕ್ಕೆ ಸಲ್ಲುತ್ತದೆ ಎಂದರೆ ಅತಿಶಯೋಕ್ತಿಯಲ್ಲ.

ಅದೇ ರೀತಿ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ನಂತರ, ಕಾಮಿಡಿ ಕಿಲಾಡಿಗಳು ಚಾಂಪಿಯನ್‍ಶಿಪ್ ಎನ್ನುವ ಹೊಸ ಪರಿಲ್ಪನೆಯ ಮೂಲಕ ಶುರುವಾದ ಹಾಸ್ಯದ ರಣಾಂಗಣದಲ್ಲಿ ಮೂರು ಸೀಸನ್‍ನ 6 ತಂಡದ ಕಿಲಾಡಿಗಳು ನಿರಂತರ ರಂಗ ತಾಲೀಮಿನ ಮೂಲಕ ಹಾಸ್ಯಕ್ಕೆ ಮತ್ತಷ್ಟು ಮೆರುಗನ್ನ ನೀಡಿ, ವಾರಾಂತ್ಯವಾದರೆ ಸಾಕು ಕಾರ್ಯಕ್ರಮಕ್ಕಾಗಿ ವೀಕ್ಷಕರು ಕಾತುರದಿಂದ ಕಾಯುವಂತೆ ಮಾಡುವಲ್ಲಿ ಸೈ ಎನಿಸಿಕೊಂಡಿದ್ದಾರೆ.ಳೀ ಸರಿ ಸುಮಾರು 37 ವಾರಗಳು ನಡೆದ ಈ ಕಾರ್ಯಕ್ರಮವು 220ಕ್ಕು ಹೆಚ್ಚು ನಾಟಕಗಳು, ಭಿನ್ನ, ವಿಭಿನ್ನ ಗೆಟಪ್‍ಗಳ ಮೂಲಕ ಹಾಸ್ಯದ ಜೊತೆಗೆ ಸಾಮಾಜಿಕ ಸಂದೇಶಗಳು ಹಾಗೂ ಪ್ರಯೋಗಾತ್ಮಕ ಸ್ಕಿಟ್‍ಗಳನ್ನ ಪ್ರದರ್ಶಿಸಿ ವಿಶೇಷ ಎನ್ನಿಸಿಕೊಂಡಿದೆ.

ಕೊರೋನಾ ಸಾಂಕ್ರಾಮಿಕ ಖಾಯಿಲೆಯಿಂದ ಲಾಕ್ಡೌನ್ ಎನ್ನುವ ಕರಾಳ ಛಾಯೆ ಜಗತ್ತಿನೆಲ್ಲ ಆವರಿಸಿ, ಅದರಿಂದ ವಿಚಲಿತರಾದ ಮನಸ್ಸುಗಳಿಗೆ ಹೊಸ ಚೈತನ್ಯ ನೀಡುವಂತೆ ಮತ್ತೇ ಶುರುವಾದ ಕಾರ್ಯಕ್ರಮ ಸಂಜೀವಿನಿಯಾಯಿತೆಂದರೆ ತಪ್ಪಲ್ಲ. ಮನರಂಜನೆಯ ಮೂಲಕ ನಾಡಿನ ಮೆಚ್ಚುಗೆಯ ಕಾರ್ಯಕ್ರಮವಾದ ಕಾಮಿಡಿ ಕಿಲಾಡಿಗಳು ಚಾಂಪಿಯನ್ ಶಿಪ್ ಸೀಸನ್ 2 ಈಗ ಫಿನಾಲೆ ಹಂತಕ್ಕೆ ಬಂದು ನಿಂತಿದೆ. ಎಂದಿನಂತೆ ನಮ್ಮ ಕಾರ್ಯಕ್ರಮದ ಹೆಮ್ಮೆಯ ತೀರ್ಪುಗಾರರಾದ ನವರಸ ನಾಯಕ ಜಗ್ಗೇಶ್, ಯೋಗರಾಜ್ ಭಟ್, ಹಾಗು ಕ್ರೇಜಿಕ್ವೀನ್ ರಕ್ಷಿತಾರವರು ಕಾರ್ಯಕ್ರಮದ ಸಾರಥ್ಯ ವಹಿಸಿದರೆ, ನಗುವಿನ ವಾರಿಯರ್ಸ್‍ಗಳ ರಾಯಭಾರಿಯಾದ ಕರ್ನಾಟಕದ ನೆಚ್ಚಿನ ನಿರೂಪಕ ಮಾಸ್ಟರ್ ಆನಂದ್‍ರವರು ಗ್ರ್ಯಾಂಡ್ ಫಿನಾಲೆಯ ನಿರೂಪಣೆಯ ಸಾರಥ್ಯ ವಹಿಸುತ್ತಿದ್ದಾರೆ.

ಜಾಹೀರಾತುಗಳು

ಇವರೆಲ್ಲರ ಜೊತೆಗೆ ನೂರಾರು ತಂತ್ರಜ್ಞರು ಹಾಗು ಶ್ರಮಿಕರ ನಿರಂತರ ಪರಿಶ್ರಮದಲ್ಲಿ ಸಜ್ಜಾಗಿರುವ ಗ್ರ್ಯಾಂಡ್ ಫಿನಾಲೆ ವೇದಿಕೆ ಕೂಡ ಸೀಸನ್ 2 ಚಾಂಪಿಯನ್ ಶಿಪ್ ಟ್ರೋಫಿ ವಿನ್ನರ್ ಯಾರಾಗಬಹುದು ಎಂಬ ಕುತೂಹಲದ ಕ್ಷಣಗಣನೆಗೆ ಎದಿರು ನೋಡುತ್ತಿದೆ. ಒಟ್ಟಾರೆ 6 ತಂಡಗಳ ವಿಭಿನ್ನ ಹಾಸ್ಯ ನಾಟಕಗಳ ಜೊತೆ ಜೊತೆಗೆ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋನ ಪ್ರತಿಭೆಗಳು ಕೂಡ ಕರುನಾಡನ್ನ ರಂಜಿಸಲು ಸಿದ್ದರಾಗಿದ್ದಾರೆ.

ಜಾಹೀರಾತುಗಳು

ಈ ಎಲ್ಲಾ ಅವೀಸ್ಮರಣೀಯ ಕ್ಷಣಗಣಗಳಿಗೆ ಗ್ರ್ಯಾಂಡ್ ಫಿನಾಲೆ ವೇದಿಕೆ ಸಜ್ಜಾಗಿದ್ದು, ವಾರಾಂತ್ಯದ ಮನರಂಜನೆಯ ಮಹಾಪೂರ ಕಾಮಿಡಿ ಕಿಲಾಡಿಗಳು ಚಾಂಪಿಯನ್ ಶಿಪ್ ಗ್ರ್ಯಾಂಡ್ ಫಿನಾಲೆಯ ಸಂಚಿಕೆ ಜುಲೈ 10 ಶನಿವಾರ ಹಾಗು 11 ರ ಭಾನುವಾರ ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ

Recent Posts

ಬೊಂಬಾಟ್ ಭೋಜನ ಕಾರ್ಯಕ್ರಮದಿಂದ ಸ್ಪೆಷಲ್ ಡಿಶ್ “ಬೊಂಬಾಟ್ ಹಲ್ವಾ” ಲೋಕಾರ್ಪಣೆ…!

ಕನ್ನಡಿಗರ ಅಚ್ಚುಮೆಚ್ಚಿನ 'ಸ್ಟಾರ್ ಸುವರ್ಣ' ವಾಹಿನಿಯಲ್ಲಿ ಮೂಡಿ ಬರುತ್ತಿರುವ ಜನಪ್ರಿಯ ಅಡುಗೆ ಷೋ "ಬೊಂಬಾಟ್ ಭೋಜನ". ಈಗಾಗಲೇ ಎರಡು ಆವೃತ್ತಿಗಳನ್ನು…

3 days ago

ಕಿರುತೆರೆಯಲ್ಲಿ ಹೊಸ ಅಧ್ಯಾಯ ಸೃಷ್ಟಿ ಮಾಡಲು ಬರ್ತಾ ಇದೆ ಹೊಸ ಕಥೆ ಅಮೃತಧಾರೆ !

ಅದ್ದೂರಿತನಕ್ಕೆ-ಹೊಸತನಕ್ಕೆ ಇನ್ನೊಂದು ಹೆಸರು ಜೀ಼ ಕನ್ನಡ. ವಿಭಿನ್ನ ಪ್ರಯತ್ನಗಳಿಂದಲೇ ಕನ್ನಡಿಗರ ಮನಗೆದ್ದಿರುವ ಹೆಮ್ಮೆಯ ವಾಹಿನಿ , ಇದೀಗ ತನ್ನ ವೀಕ್ಷಕರಿಗಾಗಿ…

6 days ago

ಮೇ ೨೯ರಿಂದ ಉದಯಟಿವಿಯಲ್ಲಿ ಮಹಾತಿರವುಗಳ ಹಬ್ಬ “ಉದಯ ದಶಮಿ” ಕನ್ಯಾದಾನದಲ್ಲಿ ನಟಿ ಸುಧಾರಾಣಿ ಅತಿಥಿ

ಕಳೆದ ಎರಡೂವರೆ ದಶಕಗಳಿಂದ ಕನ್ನಡ ಕಿರುತೆರೆ ವೀಕ್ಷಕರನ್ನು ರಂಜಿಸುತ್ತಿರುವ ಉದಯ ಟಿವಿ, ವೈವಿಧ್ಯಮಯ ಧಾರಾವಾಹಿಗಳ ಮೂಲಕ ವೀಕ್ಷಕ ಹೃದಯಕ್ಕೆ ಇನ್ನಷ್ಟು…

1 week ago

ನೀನಾದೆ ನಾ – ಸ್ಟಾರ್ ಸುವರ್ಣ ಪ್ರಸ್ತುತ ಪಡಿಸುತ್ತಿದೆ ಹೊಚ್ಚ ಹೊಸ ಧಾರಾವಾಹಿ ಇದೇ ಮೇ 16 ಮಂಗಳವಾರದಿಂದ ರಾತ್ರಿ 9.30 ಕ್ಕೆ..!

ಕನ್ನಡ ಕಿರುತೆರೆಯಲ್ಲಿ ಮನರಂಜನೆಗೆ ಹೊಸ ಮುನ್ನುಡಿ ಬರೆದ ಸ್ಟಾರ್ ಸುವರ್ಣ ವಾಹಿನಿಯು ಇದೀಗ ಹೊಸತನದೊಂದಿಗೆ ವಿಭಿನ್ನ ಕಥಾ ಹಂದರವುಳ್ಳ ಧಾರಾವಾಹಿಗಳನ್ನು…

3 weeks ago

ಛೋಟಾ ಚಾಂಪಿಯನ್, ಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌ ಸೀಸನ್‌ 7 – ಜೀ ಕನ್ನಡ ಚಾನೆಲ್ ಕಾರ್ಯಕ್ರಮಗಳು

ವಿಭಿನ್ನ, ವಿಶಿಷ್ಟ ರಿಯಾಲಿಟಿ ಶೋಗಳ ಮೂಲಕ ಹೊಸ ಮೈಲಿಗಲ್ಲುಗಳನ್ನು ಸೃಷ್ಟಿಸುತ್ತಾ ಬಂದಿರುವ ಜ಼ೀ ಕನ್ನಡ ವಾಹಿನಿಯು ಕನ್ನಡ ಕಿರುತೆರೆ ಲೋಕದಲ್ಲಿ…

4 weeks ago

ವೀರಸಿಂಹಾರೆಡ್ಡಿ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗಲಿದೆ ಬಾಲಯ್ಯ ಅಭಿನಯದ ಸೂಪರ್ ಹಿಟ್ ಸಿನಿಮಾ ಇದೇ ಏಪ್ರಿಲ್ 30 ರಂದು ಸಂಜೆ 6 ಗಂಟೆಗೆ..!

ಇತ್ತೀಚಿನ ದಿನಗಳಲ್ಲಿ ಕಿರುತೆರೆಯಲ್ಲಿ‌ ಬ್ಯಾಕ್‌ ಟು ಬ್ಯಾಕ್ ಅನೇಕ ಸೂಪರ್ ಹಿಟ್ ಸಿನಿಮಾಗಳು ಪ್ರಸಾರವಾಗುತ್ತಿದೆ. ಇದೀಗ ಕನ್ನಡದ ಜನಪ್ರಿಯ ವಾಹಿನಿ…

1 month ago
Advertisements