ಸ್ಟಾರ್ ಸುವರ್ಣ

ಸ್ಟಾರ್ ಸುವರ್ಣದಲ್ಲಿ “ಕಾಂತಾರ”.. ಮರಳಿನಲ್ಲಿ ಮೂಡಿದ ಸ್ಯಾಂಡ್ ಆರ್ಟ್…!

ಜಾಹೀರಾತುಗಳು
sand sculpture work Kantara
sand sculpture work Kantara

ದೇಶ-ವಿದೇಶಗಳಲ್ಲಿ ಸದ್ದು ಮಾಡಿದ ಕನ್ನಡದ ಹೆಮ್ಮೆಯ ಸಿನಿಮಾ “ಕಾಂತಾರ” ಇದೀಗ ಕಿರುತೆರೆಯಲ್ಲಿ ಮಿಂಚಲು ಸಜ್ಜಾಗಿದೆ. ಕನ್ನಡದ ಜನಪ್ರಿಯ ವಾಹಿನಿ ಸ್ಟಾರ್ ಸುವರ್ಣದಲ್ಲಿ ಇಂದು ಸಂಜೆ 6 ಗಂಟೆಗೆ ಸುವರ್ಣ ವರ್ಲ್ಡ್ ಪ್ರೀಮಿಯರ್ ಮೂವಿ ‘ಕಾಂತಾರ’ ಪ್ರಸಾರವಾಗಲಿದೆ. ಈಗಾಗಲೇ ಯಶಸ್ವಿ 100 ದಿನಗಳ ಪೂರೈಸಿರುವ ಕಾಂತಾರ ಇದೀಗ ಕಿರುತೆರೆಯಲ್ಲಿ ಪ್ರಸಾರವಾಗಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಸ್ಯಾಂಡ್ ಹಾರ್ಟ್ ಕಲಾವಿದರಾದ ಹರೀಶ್ ಆಚಾರ್ಯ ರವರು ಅದ್ಭುತವಾದ ಮರಳುಶಿಲ್ಪ ಕೃತಿಯನ್ನು ರಚಿಸಿದ್ದಾರೆ.

ಮಂಗಳೂರಿನ ತಣ್ಣೀರುಬಾವಿ ಕಡಲ ತೀರದ ಮರಳುರಾಶಿಯಲ್ಲಿ ‘ಕಾಂತಾರ’ ಸಿನಿಮಾ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುವುದರ ಹಿನ್ನಲೆಯಲ್ಲಿ ಮೂಡಿದ ಕಲಾಕೃತಿ ಪ್ರವಾಸಿಗರನ್ನು ಆಕರ್ಷಿಸುತ್ತಿದೆ.
ಸ್ಯಾಂಡ್ ಹಾರ್ಟ್ ಕಲಾವಿದರಾದ ಹರೀಶ್ ಆಚಾರ್ಯ ರವರು ಹೃದಯ ತುಂಬಿ ಈ ಕಲಾಕೃತಿ ರಚಿಸಿದ್ದಾರೆ. ಕನ್ನಡ ಕಿರುತೆರೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಿನಿಮಾವೊಂದಕ್ಕೆ ಈ ರೀತಿಯ ಪ್ರಚಾರ ಸಿಕ್ಕಿರೋದಕ್ಕೆ ಸ್ಟಾರ್ ಸುವರ್ಣ ವಾಹಿನಿಯು ಅಭಿನಂದಿಸುತ್ತದೆ.

ಜಾಹೀರಾತುಗಳು
Kanatara Movie Television Premier

ದಿನವಿಡೀ ಪರಿಶ್ರಮ ಪಟ್ಟು ರಚಿಸಿದ ಈ ಕಲಾಕೃತಿಯಲ್ಲಿ ಪಂಜುರ್ಲಿ ದೈವದ ಮುಖವರ್ಣಿಕೆಯ ಕಲರ್ ಫುಲ್ ಚಿತ್ರಣ ಮೂಡಿಬಂದಿದೆ. ಸ್ಟಾರ್ ಸುವರ್ಣ ವಾಹಿನಿಯಲ್ಲಿ ‘ಕಾಂತಾರ’ ಸಿನಿಮಾವು ಪ್ರಸಾರವಾಗುದರ ಕುರಿತು ವಾಹಿನಿಗೆ ಕಲಾವಿದರು ಬರಹದ ಮೂಲಕ ಶುಭ ಕೋರಿದ್ದಾರೆ. ದೇಶದಾದ್ಯಂತ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ’ ಸಿನಿಮಾವು ಕಿರುತೆರೆಯಲ್ಲೂ ಹೊಸ ಛಾಪು ಮೂಡಿಸಲಿ ಎಂದು ಆಶಿಸೋಣ.

ಕನ್ನಡ ಕಿರುತೆಯಲ್ಲಿ ಪ್ರಪ್ರಥಮ ಬಾರಿಗೆ ‘ಕಾಂತಾರ’ ಸಿನಿಮಾವು ಇಂದು ಸಂಜೆ 6 ಗಂಟೆಗೆ ನಿಮ್ಮ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ ತಪ್ಪದೇ ವೀಕ್ಷಿಸಿ.

Recent Posts

ಬೊಂಬಾಟ್ ಭೋಜನದಲ್ಲಿ “ರಾಮನವಮಿ” ವಿಶೇಷ ಸಂಚಿಕೆಯು ಇದೇ ಬುಧವಾರ ಮಧ್ಯಾಹ್ನ 12 ಗಂಟೆಗೆ

ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…

9 hours ago

ಬೊಂಬಾಟ್ ಭೋಜನ’ದಲ್ಲಿ ಯುಗಾದಿ ಸಂಭ್ರಮ….ಹಬ್ಬದೂಟಕ್ಕೆ ಆಗಮಿಸಿದ ಸ್ಯಾಂಡಲ್ವುಡ್ ಸ್ಟಾರ್ಸ್..!

ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…

1 week ago

ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯಲ್ಲಿ ‘ವರಲಕ್ಷ್ಮಿ ಕಲ್ಯಾಣ’ , ಮಹಾ ತಿರುವುಗಳುಳ್ಳ ಸಂಚಿಕೆಗಳು ಇದೇ ಸೋಮ-ಶನಿ ಸಂಜೆ 6.30 ಕ್ಕೆ.

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಮನರಂಜನೆಗೆ ಹೊಸ ಆಯಾಮ ನೀಡುತ್ತಾ ಬಂದಿದೆ. ಪ್ರಸ್ತುತ 'ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯು…

2 weeks ago

ಶ್ರೀ ಬ್ರಾಹ್ಮೀ ಹೊಸ ಕಥೆಯ ಶ್ರಾವಣಿ ಸುಬ್ರಮಣ್ಯ ಜೀ಼ ಕನ್ನಡದಲ್ಲಿ ಶುಭಾರಂಭ ಮಾರ್ಚ್‌ 18ರಿಂದ ಮಹಾಮನೋರಂಜನೆಗೆ ಮುನ್ನುಡಿ

ಮನೋರಂಜನೆಯ ಮಾತು ಬಂದಾಗಲೆಲ್ಲ ಎಲ್ಲಾ ಮನೆಯ ಟಿವಿಯು ಟ್ಯೂನ್‌ ಆಗೋದೇ ಜೀ಼ ಕನ್ನಡಕ್ಕೆ. ಕರುನಾಡನ್ನ ದಶಕಗಳಿಂದ ಮನೋರಂಜಿಸುತ್ತ ಬಂದಿರುವ ಜೀ಼…

4 weeks ago

ಸೂರ್ಯವಂಶ – ಧಾರಾವಾಹಿ ಮಾರ್ಚ್ 11 ರಿಂದ ಸೋಮ-ಶನಿವಾರ ರಾತ್ರಿ 8 ಗಂಟೆಗೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.

ಉದಯ ಟಿವಿ - ಸೂರ್ಯವಂಶ ಕನ್ನಡ ಟೆಲಿವಿಷನ್ ಕ್ಷೇತ್ರದ ತಾಯಿಬೇರಿನಂತಿರುವ ಉದಯ ಟಿವಿ ತನ್ನ ವಿಭಿನ್ನ ಧಾರಾವಾಹಿಗಳ ಮೂಲಕ ವೀಕ್ಷಕರಿಗೆ…

1 month ago

ನಾರಿ ಕುಲಕ್ಕೆ ನಮಿಸಿದ ಜೀ಼ ಸ್ತ್ರೀ ಅವಾರ್ಡ್ – ಜೀ ಕನ್ನಡ ಚಾನೆಲ್

ಜೀ ಕನ್ನಡ ಚಾನೆಲ್ - ನಾರಿ ಕುಲಕ್ಕೆ ನಮಿಸಿದ ಜೀ಼ ಸ್ತ್ರೀ ಅವಾರ್ಡ್ ಹೆಮ್ಮೆಯ ಕನ್ನಡಿಗ, ಜೀ಼ ಕುಟುಂಬದಂತಹ ಪ್ರತಿಷ್ಟಿತ…

1 month ago