ಜೀ ಕನ್ನಡ ಚಾನೆಲ್

ಮಹರ್ಷಿ ವಾಣಿ – ಜೀ಼ ಕನ್ನಡದಲ್ಲಿ ಏಳನೇ ವರ್ಷಗಳ ಮೈಲಿಗಲ್ಲು

ಜಾಹೀರಾತುಗಳು

ಕನ್ನಡ ಭಕ್ತಿ ಟಿವಿ ಕಾರ್ಯಕ್ರಮಗಳು – ಮಹರ್ಷಿ ವಾಣಿ

Maharshi Vani Zee Kannada Show
Maharshi Vani Zee Kannada Show

ಕನ್ನಡದ ಜನಪ್ರಿಯ ಕಿರುತೆರೆ ವಾಹಿನಿ ಜೀ಼ ಕನ್ನಡದಲ್ಲಿ ಪ್ರತಿನಿತ್ಯ ಪ್ರಸಾರವಾಗುತ್ತಿರುವ “ಮಹರ್ಷಿವಾಣಿ” ಯಶಸ್ವಿ ಏಳನೇ ವರ್ಷಗಳನ್ನು ಪೂರೈಸಿದೆ. ಜನಪ್ರಿಯ ಕಾರ್ಯಕ್ರಮ ಮಹರ್ಷಿವಾಣಿ ಪ್ರತಿನಿತ್ಯ ಬೆಳಿಗ್ಗೆ 8ರಿಂದ9.30ವರೆಗೆ ಪ್ರಸಾರವಾಗುತ್ತಿದೆ. ಜನರ ಧ್ವನಿಯಾಗಿ, ನಮ್ಮ ಸಂಸ್ಕೃತಿ ಆಚಾರ ವಿಚಾರಗಳ ಪ್ರತಿಧ್ವನಿಯಾಗಿ ಈ ಕಾರ್ಯಕ್ರಮ ಎಲ್ಲರನ್ನೂ ಗೆದ್ದಿದೆ.

ಈ ಕಾರ್ಯಕ್ರಮದಲ್ಲಿ ದೇಶದ ಮೂಲೆ ಮೂಲೆಗಳಿಂದ ಜನರು ಕೇಳುವ ಪ್ರಶ್ನೆಗಳಿಗೆ ಡಾ.ಮಹರ್ಷಿ ಆನಂದ್ ಗುರೂಜಿ ಅವರು ಉತ್ತರ ನೀಡುತ್ತಾರೆ. ಜೀ಼ ಕನ್ನಡದ ಅಸಂಖ್ಯ ವೀಕ್ಷಕರು ಪ್ರತಿನಿತ್ಯ ಗುರೂಜಿ ಅವರೊಂದಿಗೆ ಮಾತುಕತೆ ನಡೆಸಲು ಉತ್ಸುಕರಾಗಿರುತ್ತಾರೆ. ಇಲ್ಲಿಯವರೆಗೆ 25೦೦ಕ್ಕೂ ಹೆಚ್ಚು ಸಂಚಿಕೆಗಳನ್ನು ನಡೆಸಿಕೊಟ್ಟಿರುವ ಡಾ.ಮಹರ್ಷಿ ಆನಂದ್ ಗುರೂಜಿ ಅವರ ಮಾರ್ಗದರ್ಶನದಲ್ಲಿ ಅಸಂಖ್ಯ ಜನರು ತಮ್ಮ ಬದುಕನ್ನು ಹಸನಾಗಿಸಿಕೊಂಡಿದ್ದಾರೆ. 7೦೦ ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನಡೆಸಿರುವ ಗುರೂಜಿ ಅವರ ಕುರಿತು ಆರರಿಂದ ಅರವತ್ತರ ಎಲ್ಲರಿಗೂ ಪ್ರೀತಿ.

ಜಾಹೀರಾತುಗಳು

ಗುರೂಜಿಯವರು ಸಾಮೂಹಿಕ ಯಾಗ , ಪೂಜೆಗಳನ್ನು ಸತತ ಏಳು ವರ್ಷಗಳಿಂದ ನಡೆಸುತ್ತಾ ಬಂದಿದ್ದಾರೆ. ಅದೇ ರೀತಿ ಜನರ ಆರೋಗ್ಯ ಸಮಸ್ಯೆಗಳು ಬೇಗ ನಿವಾರಣೆಯಾಗಲಿ ಪ್ರಸ್ತುತ ಕೋವಿಡ್‌ ಸಾಂಕ್ರಾಮಿಕ ರೋಗ ನಿವಾರಣೆಯಾಗಲಿ ಜನರ ಬದುಕು ಸಹಜ ಸ್ಥಿತಿಗೆ ಮರಳಲಿ ಎಂಬ ಸದುದ್ದೇಶದಿಂದ ಇದೇ ಜೂನ್‌ ೨೪ ರ ಗುರುವಾರದಂದು ಗುರೂಜಿ ಯವರ ಆಶ್ರಮದಲ್ಲಿ ಲೋಕ ಕಲ್ಯಾಣಾರ್ಥವಾಗಿ ಧನ್ವಂತರಿ ಮಹಾಯಾಗ ಕಾರ್ಯಕ್ರಮ ನಡೆಸುತ್ತಿದ್ದಾರೆ.

ಡಾ.ಮಹರ್ಷಿ ಆನಂದ್ ಗುರೂಜಿ ಜನರಿಗೆ ಬರೀ ಸಾಂತ್ವನ ಹೇಳುವುದಲ್ಲದೇ ಅವರ ನೋವಿಗೆ ಧ್ವನಿಯಾಗಿದ್ದಾರೆ. ಧಾರ್ಮಿಕ ವಿಚಾರಗಳೇ ಅಲ್ಲದೆ ಕನ್ನಡಪರ ಸಂಘಟನೆಗಳು, ಹೋರಾಟಗಳಲ್ಲಿ ಹಾಗೂ ರೈತ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ಆಶಾ ಕಾರ್ಯಕರ್ತೆಯರು ಹಾಗೂ ಮಹಿಳಾ ಸಂಘಟನೆಗಳ ಹೋರಾಟಗಳಲ್ಲೂ ಸಕ್ರಿಯರಾಗಿ ತೊಡಗಿಕೊಳ್ಳುವ ಮೂಲಕ ಜನರ ನೋವಿಗೆ ಸದಾ ಸ್ಪಂದಿಸುವ ಕ್ರಿಯಾಶೀಲರಾಗಿದ್ದಾರೆ. ಪ್ರಸ್ತುತ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ಸದಸ್ಯರಾಗಿದ್ದು ದೇವಾಲಯಗಳ ಅಭಿವೃದ್ಧಿಯಲ್ಲೂ ತೊಡಗಿಕೊಂಡಿದ್ದಾರೆ.

Recent Posts

ಸಲಾರ್ , ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಬ್ಲಾಕ್ ಬಸ್ಟರ್ ಸಿನಿಮಾ ನೋಡುಗರಿಗೆ ಬೈಕ್ ಗೆಲ್ಲುವ ಅವಕಾಶ…ಇದೇ ಭಾನುವಾರ ರಾತ್ರಿ 7 ಗಂಟೆಗೆ..!

ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…

5 hours ago

ಹೊಸ ಅವತಾರದಲ್ಲಿ ಬರುತಿದೆ ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್

ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…

10 hours ago

ಬೊಂಬಾಟ್ ಭೋಜನದಲ್ಲಿ “ರಾಮನವಮಿ” ವಿಶೇಷ ಸಂಚಿಕೆಯು ಇದೇ ಬುಧವಾರ ಮಧ್ಯಾಹ್ನ 12 ಗಂಟೆಗೆ

ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…

1 week ago

ಬೊಂಬಾಟ್ ಭೋಜನ’ದಲ್ಲಿ ಯುಗಾದಿ ಸಂಭ್ರಮ….ಹಬ್ಬದೂಟಕ್ಕೆ ಆಗಮಿಸಿದ ಸ್ಯಾಂಡಲ್ವುಡ್ ಸ್ಟಾರ್ಸ್..!

ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…

2 weeks ago

ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯಲ್ಲಿ ‘ವರಲಕ್ಷ್ಮಿ ಕಲ್ಯಾಣ’ , ಮಹಾ ತಿರುವುಗಳುಳ್ಳ ಸಂಚಿಕೆಗಳು ಇದೇ ಸೋಮ-ಶನಿ ಸಂಜೆ 6.30 ಕ್ಕೆ.

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಮನರಂಜನೆಗೆ ಹೊಸ ಆಯಾಮ ನೀಡುತ್ತಾ ಬಂದಿದೆ. ಪ್ರಸ್ತುತ 'ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯು…

3 weeks ago

ಶ್ರೀ ಬ್ರಾಹ್ಮೀ ಹೊಸ ಕಥೆಯ ಶ್ರಾವಣಿ ಸುಬ್ರಮಣ್ಯ ಜೀ಼ ಕನ್ನಡದಲ್ಲಿ ಶುಭಾರಂಭ ಮಾರ್ಚ್‌ 18ರಿಂದ ಮಹಾಮನೋರಂಜನೆಗೆ ಮುನ್ನುಡಿ

ಮನೋರಂಜನೆಯ ಮಾತು ಬಂದಾಗಲೆಲ್ಲ ಎಲ್ಲಾ ಮನೆಯ ಟಿವಿಯು ಟ್ಯೂನ್‌ ಆಗೋದೇ ಜೀ಼ ಕನ್ನಡಕ್ಕೆ. ಕರುನಾಡನ್ನ ದಶಕಗಳಿಂದ ಮನೋರಂಜಿಸುತ್ತ ಬಂದಿರುವ ಜೀ಼…

1 month ago