ಸ್ಟಾರ್ ಸುವರ್ಣ

ಸವದತ್ತಿಯಲ್ಲಿ ‘ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ’ ಧಾರಾವಾಹಿ ವಾಹನಕ್ಕೆ ಚಾಲನೆ..

ಜಾಹೀರಾತುಗಳು
Renuka Yellamma Serial Promotions
Renuka Yellamma Serial Promotions

ಕನ್ನಡ ಕಿರುತೆರೆಗೆ ಹಲವಾರು ಮಹತ್ವದ ಪೌರಾಣಿಕ ಧಾರಾವಾಹಿಗಳನ್ನು ನೀಡಿ ವೀಕ್ಷಕರ ಮನಗೆದ್ದಿರುವ ಸ್ಟಾರ್ ಸುವರ್ಣ ವಾಹಿನಿಯು ಇದೀಗ ಮತ್ತೊಮ್ಮೆ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯ, ರಾಷ್ಟ್ರದ ಹಲವಾರು ಭಾಗಳಲ್ಲಿ ಭಕ್ತರನ್ನು ಹೊಂದಿರುವ ಶ್ರೀರೇಣುಕಾ ಯಲ್ಲಮ್ಮ ಮಹ್ಮಾತೆಯ ಕುರಿತಾದ ‘ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ’ ಧಾರಾವಾಹಿಯನ್ನು ಇದೇ ಜನವರಿ 23 ರಿಂದ ಪ್ರಸಾರ ಮಾಡಲಿದೆ.

ಈ ಧಾರಾವಾಹಿಯ ಪ್ರಸಾರಕ್ಕೂ ಮುನ್ನ ಈ ದೇವಿಯ ದರ್ಶನವನ್ನು ರಾಜ್ಯಾದ್ಯಂತ ಭಕ್ತರಿಗೆ ಮಾಡಿಸುವ ಉದ್ದೇಶದಿಂದ ವಾಹಿನಿ ಹಮ್ಮಿಕೊಂಡಿದ್ದ “ಟೆಂಪಲ್ ಆನ್ ವೀಲ್ಸ್” ಎಂಬ ಕಾರ್ಯಕ್ರಮಕ್ಕೆ ಸವದತ್ತಿಯಲ್ಲಿ ದೇವಿ ದರ್ಶನದ ವಾಹನಕ್ಕೆ ಚಾಲನೆ ನೀಡಲಾಯಿತು. ಸುವರ್ಣ ಸಂಕಲ್ಪ ಖ್ಯಾತಿಯ ಡಾ. ಗೋಪಾಲ ಶರ್ಮಾ ಗುರೂಜೀ ಈ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಯಲ್ಲಮ್ಮ ದೇವಾಲಯದ ಹಿರಿಯ ಸ್ವಾಮೀಜಿಗಳಾದ ಯಡಿಯೂರಯ್ಯ ಮತ್ತಿತರರು ಹಾಜರಿದ್ದು ಈ ಮಹತ್ವದ ಕಾರ್ಯಕ್ರಮಕ್ಕೆ ಶುಭಕೋರಿದರು.

ಜಾಹೀರಾತುಗಳು

ಮನೆಯಲ್ಲೇ ದೇವಿ ದರ್ಶನ: ಇದೇ ಸಂದರ್ಭದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ. ಗೋಪಾಲಶರ್ಮಾ ಗುರೂಜೀ ಅವರು ಸ್ಟಾರ್ ಸುವರ್ಣ ವಾಹಿನಿಯವರು ಉತ್ತರ ಕರ್ನಾಟಕದ ಶಕ್ತಿದೇವತೆಯಾದ ಯಲ್ಲಮ್ಮದೇವಿಯ ಕತೆಯನ್ನು ಎಲ್ಲ ಭಕ್ತರ ಮನೆಮನೆಗಳಿಗೆ ತಲುಪಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ. ಲೋಕ ಕಲ್ಯಾಣದ ಈ ಕಾರ್ಯಕ್ಕೆ ಎಲ್ಲರೂ ಸಹಕರಿಸುವಂತಾಗಲಿ, ಈ ಧಾರಾವಾಹಿ ಯಶಸ್ಸು ಕಾಣಲಿ ಎಂದು ಹಾರೈಸಿದರು.
.
ಉಧೋ ಉಧೋ ವಿಶೇಷ : ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ ಧಾರವಾಹಿಯು ಜನವರಿ 23 ರಿಂದ ಸೋಮವಾರದಿಂದ ಶನಿವಾರದವರೆಗೆ ರಾತ್ರಿ 8.30 ಕ್ಕೆ ಪ್ರಸಾರವಾಗಲಿದೆ.
ಈ ಧಾರವಾಹಿಯಲ್ಲಿ ಅತ್ಯಾಧುನಿಕ ಗ್ರಾಫಿಕ್ಸ್ ಬಳಸಿಕೊಳ್ಳಲಾಗಿದೆ. ವೀಕ್ಷಕರು ಇದೇ ಮೊದಲಬಾರಿಗೆ ಹಲವಾರು ಹೊಸ ತಂತ್ರಜ್ಞಾನದ ಅನುಭವ ಕಾಣಲಿದ್ದರೆ.

ಬೃಹತ್‌ ನಿರ್ಮಾಣ ಸಂಸ್ಥೆಯಾದ ನಂದಿ ಪ್ರೋಡಕ್ಷನ್ ಈ ಧಾರಾವಾಹಿ ನಿರ್ಮಾಣ ಮಾಡಿದೆ. ಇದಕ್ಕಾಗಿ ಬೆಂಗಳೂರು ಹೊರ ವಲಯದಲ್ಲಿ ಭಾರಿ ಸೆಟ್ ಗಳನ್ನು ಹಾಕಲಾಗಿದ್ದು ಧಾರವಾಹಿಯಲ್ಲಿ ದೊಡ್ಡ ತಾರಾಬಳಗ ಕಾಣಬಹುದು.

Recent Posts

ಬೊಂಬಾಟ್ ಭೋಜನದಲ್ಲಿ “ರಾಮನವಮಿ” ವಿಶೇಷ ಸಂಚಿಕೆಯು ಇದೇ ಬುಧವಾರ ಮಧ್ಯಾಹ್ನ 12 ಗಂಟೆಗೆ

ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…

1 day ago

ಬೊಂಬಾಟ್ ಭೋಜನ’ದಲ್ಲಿ ಯುಗಾದಿ ಸಂಭ್ರಮ….ಹಬ್ಬದೂಟಕ್ಕೆ ಆಗಮಿಸಿದ ಸ್ಯಾಂಡಲ್ವುಡ್ ಸ್ಟಾರ್ಸ್..!

ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…

1 week ago

ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯಲ್ಲಿ ‘ವರಲಕ್ಷ್ಮಿ ಕಲ್ಯಾಣ’ , ಮಹಾ ತಿರುವುಗಳುಳ್ಳ ಸಂಚಿಕೆಗಳು ಇದೇ ಸೋಮ-ಶನಿ ಸಂಜೆ 6.30 ಕ್ಕೆ.

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಮನರಂಜನೆಗೆ ಹೊಸ ಆಯಾಮ ನೀಡುತ್ತಾ ಬಂದಿದೆ. ಪ್ರಸ್ತುತ 'ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯು…

2 weeks ago

ಶ್ರೀ ಬ್ರಾಹ್ಮೀ ಹೊಸ ಕಥೆಯ ಶ್ರಾವಣಿ ಸುಬ್ರಮಣ್ಯ ಜೀ಼ ಕನ್ನಡದಲ್ಲಿ ಶುಭಾರಂಭ ಮಾರ್ಚ್‌ 18ರಿಂದ ಮಹಾಮನೋರಂಜನೆಗೆ ಮುನ್ನುಡಿ

ಮನೋರಂಜನೆಯ ಮಾತು ಬಂದಾಗಲೆಲ್ಲ ಎಲ್ಲಾ ಮನೆಯ ಟಿವಿಯು ಟ್ಯೂನ್‌ ಆಗೋದೇ ಜೀ಼ ಕನ್ನಡಕ್ಕೆ. ಕರುನಾಡನ್ನ ದಶಕಗಳಿಂದ ಮನೋರಂಜಿಸುತ್ತ ಬಂದಿರುವ ಜೀ಼…

4 weeks ago

ಸೂರ್ಯವಂಶ – ಧಾರಾವಾಹಿ ಮಾರ್ಚ್ 11 ರಿಂದ ಸೋಮ-ಶನಿವಾರ ರಾತ್ರಿ 8 ಗಂಟೆಗೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.

ಉದಯ ಟಿವಿ - ಸೂರ್ಯವಂಶ ಕನ್ನಡ ಟೆಲಿವಿಷನ್ ಕ್ಷೇತ್ರದ ತಾಯಿಬೇರಿನಂತಿರುವ ಉದಯ ಟಿವಿ ತನ್ನ ವಿಭಿನ್ನ ಧಾರಾವಾಹಿಗಳ ಮೂಲಕ ವೀಕ್ಷಕರಿಗೆ…

1 month ago

ನಾರಿ ಕುಲಕ್ಕೆ ನಮಿಸಿದ ಜೀ಼ ಸ್ತ್ರೀ ಅವಾರ್ಡ್ – ಜೀ ಕನ್ನಡ ಚಾನೆಲ್

ಜೀ ಕನ್ನಡ ಚಾನೆಲ್ - ನಾರಿ ಕುಲಕ್ಕೆ ನಮಿಸಿದ ಜೀ಼ ಸ್ತ್ರೀ ಅವಾರ್ಡ್ ಹೆಮ್ಮೆಯ ಕನ್ನಡಿಗ, ಜೀ಼ ಕುಟುಂಬದಂತಹ ಪ್ರತಿಷ್ಟಿತ…

1 month ago