ಜಾಹೀರಾತು

ನೇತಾಜಿ ಸುಭಾಷ್ ಚಂದ್ರ ಬೋಸ್ – ಜೀ ಕನ್ನಡದಿಂದ ಜೂನ್ 7ರಿಂದ ವಿನೂತನ ಧಾರಾವಾಹಿ ಪ್ರಾರಂಭ

ಜಾಹೀರಾತುಗಳು
ನೇತಾಜಿ ಸುಭಾಷ್ ಚಂದ್ರ ಬೋಸ್
Zee Serial Netaji Kannada Version

ಫಿಕ್ಷನ್ ಹಾಗೂ ನಾನ್-ಫಿಕ್ಷನ್ ಕಾರ್ಯಕ್ರಮಗಳಲ್ಲಿ ತನ್ನ ವಿನೂತನ ಪರಿಕಲ್ಪನೆಗಳಿಗೆ ಹೆಸರಾದ ಕನ್ನಡದ ಮುಂಚೂಣಿಯ ಕಿರುತೆರೆ ವಾಹಿನಿ ಜೀ ಕನ್ನಡ ತನ್ನ ಹೊಸ ಧಾರಾವಾಹಿ “ನೇತಾಜಿ ಸುಭಾಷ್ ಚಂದ್ರ ಬೋಸ್” ಪ್ರಾರಂಭಿಸಲಿದೆ. ವೀಕ್ಷಕರಿಗೆ ಮನ ಮುಟ್ಟುವ ಧಾರಾವಾಹಿಗಳನ್ನು ರೂಪಿಸುವ ಜೀ ಕನ್ನಡದಿಂದ ಮತ್ತೊಂದು ಮಹೋನ್ನತ ಕಾರ್ಯಕ್ರಮವಾಗಿದೆ.

ಜೂನ್ 7ರಿಂದ ಪ್ರತಿ ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 5ರಿಂದ 6 ಗಂಟೆಗೆ ಒಂದು ಗಂಟೆ ಕಾಲ ಪ್ರಸಾರವಾಗಲಿರುವ ಈ ಧಾರಾವಾಹಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಸ್ವತಃ ಸೈನ್ಯ ಕಟ್ಟಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ ಧೀರ ನಾಯಕನ ಐತಿಹಾಸಿಕ ಕಥೆಯನ್ನು ಬಿಂಬಿಸುತ್ತದೆ.

ಅಂಬೇಡ್ಕರ್ ಧಾರಾವಾಹಿ ಪ್ರಸಾರದಿಂದ ಕರ್ನಾಟಕದ ಮೂಲೆ ಮೂಲೆಯಲ್ಲೂ ಅಬಾಲವೃದ್ಧರಾದಿ ಶ್ಲಾಘನೆ ಪಡೆದಿರುವ ಜೀ ಕನ್ನಡ ಇದೀಗ ಸುಭಾಷ್ ಚಂದ್ರ ಬೋಸ್ ಅವರ ಜೀವನಗಾಥೆಯನ್ನು ಮನರಂಜಿಸುವ ರೀತಿಯಲ್ಲಿ ಇತಿಹಾಸವನ್ನು ಮರು ಕಟ್ಟಿಕೊಡಲಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮದೇ ಹಾದಿ ತುಳಿದ ಅವರು ಜರ್ಮನಿಯ ನೆರವಿನೊಂದಿಗೆ “ಇಂಡಿಯನ್ ನ್ಯಾಷನಲ್ ಆರ್ಮಿ” ಕಟ್ಟಿದರು. ಒರಿಸ್ಸಾದ ಕಟಕ್ ನಲ್ಲಿ ಜನಿಸಿದ ಅವರು ತನ್ನ ತಂದೆಯ ಆಸೆಯಂತೆ ಇಂಡಿಯನ್ ಸಿವಿಲ್ ಸರ್ವೀಸ್ ಸೇರಲು ಬ್ರಿಟನ್ನಿಗೆ ಹೋದರೂ ನಂತರ ಭಾರತಕ್ಕೆ ಹಿಂದಿರುಗಿ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದರು. ಗಾಂಧಿಯವರ ಅಹಿಂಸಾ ಹೋರಾಟ ವಿರೋಧಿಸಿ ಸ್ವಂತ ಸೇನೆ ಕಟ್ಟಿದರು. ಅವರ ವಿಮಾನ ಅಪಘಾತದಲ್ಲಿ ಮೃತರಾದರು ಎಂದು ನಂಬಲಾಗಿದೆ. ಆದರೆ ಅದನ್ನು ಒಪ್ಪದೇ ಇರುವವರೂ ಬಹಳ ಮಂದಿ ಇದ್ದಾರೆ.

ಜಾಹೀರಾತುಗಳು

ಒಟ್ಟಿನಲ್ಲಿ ಕನ್ನಡದ ಮುಂಚೂಣಿಯ ಕಿರುತೆರೆ ವಾಹಿನಿ ಜೀ ಕನ್ನಡದಿಂದ ಹೊಚ್ಚಹೊಸ, ವಿನೂತನ ಕಾರ್ಯಕ್ರಮಗಳನ್ನು ನಿರೀಕ್ಷಿಸುವ ವೀಕ್ಷಕರಿಗೆ ಭರಪೂರ ರಂಜನೆ, ಮತ್ತೆ ಸ್ವಾತಂತ್ರ್ಯ ಹೋರಾಟದ ಸ್ಫೂರ್ತಿಯ ಕಿಚ್ಚು ತುಂಬುವ ಈ ಧಾರಾವಾಹಿಯನ್ನು ವೀಕ್ಷಕರು ಈ ಹಿಂದಿನ ಎಲ್ಲ ಧಾರಾವಾಹಿಗಳಂತೆಯೇ ಆದರದಿಂದ ಸ್ವೀಕರಿಸುತ್ತಾರೆ ಎಂಬ ಭರವಸೆಯನ್ನು ಜೀ ಕನ್ನಡ ಹೊಂದಿದೆ.

Netaji Subhash Chandra Bose Serial

Recent Posts

ಗಂಗೆ ಗೌರಿ – ಉದಯ ಟಿವಿಯಲ್ಲಿ ಹೊಸ ಧಾರಾವಾಹಿ ಡಿಸೆಂಬರ್ 11 ರಿಂದ ಸೋಮವಾರದಿಂದ ಶನಿವಾರ ಸಂಜೆ 6.30 ಕ್ಕೆ

ಇದೇ ಡಿಸೆಂಬರ್‌ 11 ರಿಂದ ಸೋಮವಾರದಿಂದ ಶನಿವಾರ ಸಂಜೆ 6.30ಕ್ಕೆ ಉದಯ ಟಿವಿ ಯಲ್ಲಿ ಪ್ರಸಾರವಾಗಲಿದೆ - ಗಂಗೆ ಗೌರಿ ಹೊಸ…

1 day ago

ಆಸೆ , ರಮೇಶ್ ಅರವಿಂದ್ ನಿರ್ಮಾಣದಲ್ಲಿ ಶುರುವಾಗ್ತಿದೆ ಹೊಚ್ಚ ಹೊಸ ಧಾರಾವಾಹಿ , ಇದೇ ಸೋಮವಾರದಿಂದ ರಾತ್ರಿ 7.30ಕ್ಕೆ!

ಸ್ಟಾರ್ ಸುವರ್ಣ - ಆಸೆ ಕಿರುತೆರೆ ವೀಕ್ಷಕರಿಗೆ ಸ್ಟಾರ್ ಸುವರ್ಣ ವಾಹಿನಿಯು ನೂತನವಾದ ಮನಮುಟ್ಟುವ ಮನರಂಜನೆಯ ಧಾರಾವಾಹಿಗಳನ್ನು ನೀಡುತ್ತಲೇ ಬರುತ್ತಿದೆ,…

3 days ago

ಸುವರ್ಣ ಜಾಕ್ ಪಾಟ್ ಕಾಂಟೆಸ್ಟ್ ನಲ್ಲಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಬಹುಮಾನ ಗೆದ್ದ ಹಾಸನದ ಮಹಿಳೆ.. ನಿಮಗಿದೆ ಮತ್ತೊಂದು ಸುವರ್ಣಾವಕಾಶ ?

ಸ್ಟಾರ್ ಸುವರ್ಣ ವಾಹಿನಿಯು ಹೊಸತನದ ಕಾರ್ಯಕ್ರಮಗಳನ್ನು ನೀಡುವಲ್ಲಿ ಸದಾಕಾಲ ಯಶಸ್ವಿಯಾಗಿದೆ. ಹೀಗಾಗಿ ನೋಡುಗರಿಗೆ ಇನ್ನಷ್ಟು ಮನೋರಂಜನೆ ನೀಡಲು ಶುರುಮಾಡಿದ ವಿಭಿನ್ನ…

6 days ago

ಅವನು ಮತ್ತೆ ಶ್ರಾವಣಿ”ಯಲ್ಲಿ ವಿವಾಹ ಅಧ್ಯಾಯ.. ಮಹಾ ತಿರುವುಗಳುಳ್ಳ ಸಂಚಿಕೆಗಳು ಸೋಮ-ಶನಿ ರಾತ್ರಿ 10 ಗಂಟೆಗೆ..!

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಮನರಂಜನೆಗೆ ಹೊಸ ಆಯಾಮ ನೀಡುತ್ತಾ ಬಂದಿದೆ. ಪ್ರಸ್ತುತ 'ಅವನು ಮತ್ತೆ ಶ್ರಾವಣಿ' ಎಂಬ…

1 week ago

ಸುವರ್ಣ ಜಾಕ್ ಪಾಟ್ – ಇದೇ ನವೆಂಬರ್ 26 ರಿಂದ ಪ್ರತಿ ಭಾನುವಾರ ರಾತ್ರಿ 7 ಗಂಟೆಗೆ – ಸ್ಟಾರ್ ಸುವರ್ಣ

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸತನದ ಕಾರ್ಯಕ್ರಮಗಳನ್ನು ನೀಡುವಲ್ಲಿ ಸದಾಕಾಲ ಯಶಸ್ವಿಯಾಗಿದೆ. ಈ ನಿಟ್ಟಿನಲ್ಲಿ ಸ್ಟಾರ್ ಸುವರ್ಣ, ಪ್ರೇಕ್ಷಕರಿಗೆ…

2 weeks ago

ಡ್ರಾಮಾ ಜ್ಯೂನಿಯರ್ಸ್ ಸೀಸನ್ 5 , ಶುರುವಾಗ್ತಿದೆ ಪ್ರೇಕ್ಷಕರ ಅಚ್ಚುಮೆಚ್ಚಿನ ರಿಯಾಲಿಟಿ ಶೋ ಇದೇ ನವೆಂಬರ್ 18 ರಿಂದ ಶನಿವಾರ – ಭಾನುವಾರ ರಾತ್ರಿ 9 ಗಂಟೆಗೆ..!

ರಿಯಾಲಿಟಿ ಶೋಗಳಲ್ಲಿ ನಿರೀಕ್ಷೆಗೂ ಮೀರಿ ತನ್ನದೇ ಸಂಚಲನ ಮೂಡಿಸಿದ ವಾಹಿನಿ ಜ಼ೀ ಕನ್ನಡ. ಪ್ರೇಕ್ಷಕರ ಬೇಕು, ಬೇಡಗಳನ್ನು ಅರ್ಥೈಸಿಕೊಂಡು ಇಲ್ಲಿಯವರೆಗೂ…

3 weeks ago
ಜಾಹೀರಾತು