ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ವಿಭಿನ್ನ ರೀತಿಯ ವಿಶಿಷ್ಟ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ಪ್ರೇಕ್ಷಕರ ಮನಗೆದ್ದಿದೆ. ನವೆಂಬರ್ 28 ರಿಂದ ಅಂದ್ರೆ ಇಂದಿನಿಂದ ಸಂಜೆ 7 ಗಂಟೆಗೆ “ಕಥೆಯೊಂದು ಶುರುವಾಗಿದೆ” ಎಂಬ ಹೊಚ್ಚ ಹೊಸ ಧಾರಾವಾಹಿಯನ್ನು ಪ್ರಸಾರ ಮಾಡಲು ಸಜ್ಜಾಗಿದೆ. ಈ ನಿಟ್ಟಿನಲ್ಲಿ ವೀಕ್ಷಕರಿಗೆ ಬಹುಮಾನ ಗೆಲ್ಲುವಂತಹ ಸುವರ್ಣಾವಕಾಶವನ್ನು ಸ್ಟಾರ್ ಸುವರ್ಣ ಕಲ್ಪಿಸುತ್ತಿದೆ.
.
“ಕಥೆಯೊಂದು ಶುರುವಾಗಿದೆ” ಇದು ಮೂರು ಜೋಡಿಗಳು ಹಾಗೂ ಎರಡು ಮನೆತನಗಳ ಮಧ್ಯೆ ನಡೆಯುವ ಪ್ರೀತಿ ಸಂಘರ್ಷದ ಅದ್ದೂರಿ ಧಾರಾವಾಹಿ. ಒಬ್ಬಳು ಸ್ವಾಭಿಮಾನಿ, ಇನ್ನೊಬ್ಬ ಅಹಂಕಾರಿ. ಸ್ವಾಭಿಮಾನಿ ಹಾಗು ಅಹಂಕಾರಿಯ ನಡುವೆ ನಡೆಯುವ ಜಿದ್ದಾ ಜಿದ್ದಿಯೇ ಈ ಧಾರಾವಾಹಿಯ ಕಥಾಹಂದರ. ಈ ಭಿನ್ನ ಜಗತ್ತಿನ ವಿಭಿನ್ನ ಮನಸುಗಳು ಹೇಗೆ ಒಂದಾಗುತ್ತೆ ಅನ್ನೋದನ್ನು ಮುಂದೆ ಕಾದುನೋಡಬೇಕಿದೆ.
ಹೀಗಾಗಿ ಸ್ಟಾರ್ ಸುವರ್ಣ ವಾಹಿನಿಯು ವೀಕ್ಷಕರಿಗೊಂದು “ಸುವರ್ಣ Golden ನಂಬರ್” ಎಂಬ ಕಾಂಟೆಸ್ಟ್ ಅನ್ನು ನೀಡುತ್ತಿದೆ. ಇಂದಿನಿಂದ 6 ದಿನಗಳ ಕಾಲ “ಕಥೆಯೊಂದು ಶುರುವಾಗಿದೆ” ಧಾರಾವಾಹಿಯ ಸಂಚಿಕೆಯ ಕೊನೆಯಲ್ಲಿ ನಾವು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿ ಬಹುಮಾನವಾಗಿ “43 ಇಂಚಿನ LED TV” ಯನ್ನು ನಿಮ್ಮದಾಗಿಸಿಕೊಳ್ಳಿ
ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…
ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…
ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಮನರಂಜನೆಗೆ ಹೊಸ ಆಯಾಮ ನೀಡುತ್ತಾ ಬಂದಿದೆ. ಪ್ರಸ್ತುತ 'ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯು…
ಮನೋರಂಜನೆಯ ಮಾತು ಬಂದಾಗಲೆಲ್ಲ ಎಲ್ಲಾ ಮನೆಯ ಟಿವಿಯು ಟ್ಯೂನ್ ಆಗೋದೇ ಜೀ಼ ಕನ್ನಡಕ್ಕೆ. ಕರುನಾಡನ್ನ ದಶಕಗಳಿಂದ ಮನೋರಂಜಿಸುತ್ತ ಬಂದಿರುವ ಜೀ಼…
ಉದಯ ಟಿವಿ - ಸೂರ್ಯವಂಶ ಕನ್ನಡ ಟೆಲಿವಿಷನ್ ಕ್ಷೇತ್ರದ ತಾಯಿಬೇರಿನಂತಿರುವ ಉದಯ ಟಿವಿ ತನ್ನ ವಿಭಿನ್ನ ಧಾರಾವಾಹಿಗಳ ಮೂಲಕ ವೀಕ್ಷಕರಿಗೆ…
ಜೀ ಕನ್ನಡ ಚಾನೆಲ್ - ನಾರಿ ಕುಲಕ್ಕೆ ನಮಿಸಿದ ಜೀ಼ ಸ್ತ್ರೀ ಅವಾರ್ಡ್ ಹೆಮ್ಮೆಯ ಕನ್ನಡಿಗ, ಜೀ಼ ಕುಟುಂಬದಂತಹ ಪ್ರತಿಷ್ಟಿತ…