ಅವನು ಮತ್ತೆ ಶ್ರಾವಣಿ, ಶುರುವಾಗ್ತಿದೆ ಹೊಚ್ಚ ಹೊಸ ಭಾವನಾತ್ಮಕ ಪ್ರೀತಿ ಕಥೆ ಇದೇ ಅಕ್ಟೋಬರ್ 2 ರಿಂದ ರಾತ್ರಿ 10 ಗಂಟೆಗೆ !

Avanu Mathe Shravani Serial

ಸ್ಟಾರ್ ಸುವರ್ಣ – ಅವನು ಮತ್ತೆ ಶ್ರಾವಣಿ ಕನ್ನಡ ಕಿರುತೆರೆಯಲ್ಲಿ ಮನರಂಜನೆಗೆ ಹೊಸ ಮುನ್ನುಡಿ ಬರೆದ ಸ್ಟಾರ್ ಸುವರ್ಣ ವಾಹಿನಿಯು ಇದೀಗ ಹೊಸತನದೊಂದಿಗೆ ವಿಭಿನ್ನ ಕಥಾ ಹಂದರವುಳ್ಳ ಧಾರಾವಾಹಿಗಳನ್ನು ನೀಡುತ್ತಿದೆ. ಈ ಹಿಂದೆ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಿದ್ದ ‘ಅವನು ಮತ್ತೆ ಶ್ರಾವಣಿ’ ಧಾರಾವಾಹಿ 900 ಕ್ಕೂ ಹೆಚ್ಚು ಯಶಸ್ವಿ ಸಂಚಿಕೆಗಳೊಂದಿಗೆ ಪ್ರೇಕ್ಷಕರ ಮನಗೆದ್ದು ಕಿರುತೆರೆಯಲ್ಲಿ ಹೊಸ ಸಂಚಲನವನ್ನು ಮೂಡಿಸಿತ್ತು. ಇದೀಗ ಅದೇ ಹೆಸರಿನಲ್ಲಿ ಹೊಸದೊಂದು ಲವ್ ಸ್ಟೋರಿಯನ್ನು ಪ್ರಸಾರ ಮಾಡಲು ಸ್ಟಾರ್ ಸುವರ್ಣ ಸಜ್ಜಾಗಿದೆ. ಅವನು ಮತ್ತೆ … Read more

ಸುವರ್ಣ ಸಂಕಲ್ಪ‌, ಯಶಸ್ವಿ 1000 ಸಂಚಿಕೆಗಳನ್ನು ಪೂರೈಸಿ ಮುನ್ನುಗ್ಗುತ್ತಿದೆ ಸ್ಟಾರ್ ಸುವರ್ಣದ ದೈನಂದಿನ ಕಾರ್ಯಕ್ರಮ

Suvarna Sankalp 1000 Episodes

ಕಾರ್ಯಕ್ರಮವು ಪ್ರತಿದಿನ ಬೆಳಗ್ಗೆ 7.30 ಕ್ಕೆ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗುತ್ತದೆ – ಸುವರ್ಣ ಸಂಕಲ್ಪ ಕರ್ನಾಟಕದ ಜನತೆಗೆ ಪ್ರತಿದಿನ ಮುಂಜಾನೆ ದೇವರ ದರ್ಶನದ ಜೊತೆಗೆ ಜೀವನದ ಹಾದಿ‌ಯನ್ನು ಮಾರ್ಗದರ್ಶಿಸಿ, ಅಭಿಮಾನಿ‌ ವೀಕ್ಷಕರಿಗೆ ಭಾರತದಲ್ಲಿರುವ ಹೆಸರಾಂತ ದೈವಸಾನಿದ್ಯವನ್ನು ತೋರಿಸುತ್ತಿರುವುದು ಸ್ಟಾರ್ ಸುವರ್ಣ ವಾಹಿನಿಯ ‘ಸುವರ್ಣ ಸಂಕಲ್ಪ’ ಕಾರ್ಯಕ್ರಮ. ಕರ್ನಾಟಕ ಮಾತ್ರವಲ್ಲದೆ ಭಾರತದ ಹೆಸರಾಂತ ಭಕ್ತತಾಣಗಳಾದ ಮಥುರಾ, ಅಯೋಧ್ಯಾ, ರಾಮೇಶ್ವರಂ, ಶ್ರೀಲಂಕಾ, ಕಾಶಿ, ಮಂತ್ರಾಲಯ ಸೇರಿದಂತೆ ಇನ್ನೂ ಹಲವು ದೈವತಾಣಗಳ ಇತಿಹಾಸ, ಅಲ್ಲಿನ ವಿಶೇಷ, ಹಾಗು ಮಹತ್ವವನ್ನು ಕನ್ನಡಿಗರಿಗೆ ತೋರಿಸಿ … Read more

ಡೇರ್ ಡೆವಿಲ್ ಮುಸ್ತಾಫಾ – ಸ್ಟಾರ್ ಸುವರ್ಣದಲ್ಲಿ ಬರ್ತಿದೆ ಕಾಮಿಡಿ ಎಂಟರ್ಟೈನರ್ ಸಿನಿಮಾ ಸೆಪ್ಟೆಂಬರ್ 17 ರಂದು ಸಂಜೆ 6 ಗಂಟೆಗೆ..!

Daredevil Musthafa Movie WTP

ಕನ್ನಡಿಗರ ಅಚ್ಚು ಮೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯು ದಿನದಿಂದ ದಿನಕ್ಕೆ ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ನೀಡುತ್ತಿದ್ದು ಇದೀಗ ಸುವರ್ಣ ವರ್ಲ್ಡ್ ಪ್ರೀಮಿಯರ್ ‘ಡೇರ್ ಡೆವಿಲ್ ಮುಸ್ತಾಫಾ’ ಸಿನಿಮಾವನ್ನು ಪ್ರಸಾರ ಮಾಡಲು ಸಜ್ಜಾಗಿದೆ. ‘ಡೇರ್ ಡೆವಿಲ್ ಮುಸ್ತಾಫಾ’ ಇದು ಕೆ ಪಿ ಪೂರ್ಣಚಂದ್ರ ತೇಜಸ್ವಿ ಅವರ ಸಣ್ಣ ಕಥೆ ಆಧಾರಿತ ಸಿನಿಮಾ. ಕರ್ನಾಟಕದ ಚಿಕ್ಕಮಗಳೂರಿನ ಚಿಕ್ಕ ಪಟ್ಟಣವಾದ ಅಬಚೂರಿನಲ್ಲಿ ರಾಮಾನುಜ ಅಯ್ಯಂಗಾರ್ ಮತ್ತು ಅವನ ಗೆಳೆಯರ ಗುಂಪು ಶಾಲೆಯನ್ನು ಮುಗಿಸಿ ಕಾಲೇಜಿಗೆ ಸೇರಿರುತ್ತಾರೆ. ಅದೇ ಕಾಲೇಜಿಗೆ ಎಂಟ್ರಿ ಕೊಡ್ತಾನೆ … Read more

ಸರ್ಕಸ್ – ಕನ್ನಡ ಕಿರುತೆರೆ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಪ್ರೈಮ್ ಟೈಮ್ ನಲ್ಲಿ ಬರ್ತಿದೆ ಈ ವರ್ಷದ ಸೂಪರ್ ಹಿಟ್ ತುಳು ಸಿನಿಮಾ ಸೆಪ್ಟೆಂಬರ್

Circus Movie in Tulu

10 ರಂದು ಸಂಜೆ 6 ಗಂಟೆಗೆ – ಸರ್ಕಸ್, ಸ್ಟಾರ್ ಸುವರ್ಣ ಕನ್ನಡ ಕಿರುತೆರೆಯಲ್ಲಿ ‘ತುಳು’ ಭಾಷೆಗೆ ವಿಶೇಷ ಪ್ರಾಮುಖ್ಯತೆಯನ್ನು ನೀಡುತ್ತಾ ಬಂದಿರುವ ಕನ್ನಡದ ಮೊದಲ ವಾಹಿನಿ ‘ಸ್ಟಾರ್ ಸುವರ್ಣ’. 2010 ರಲ್ಲಿ ಸುವರ್ಣ ವಾಹಿನಿಯು “ಗೊತ್ತಾನಗ ಪೊರ್ತಾಂಡ್” ಎಂಬ ‘ತುಳು’ ಧಾರಾವಾಹಿಯನ್ನು ಪ್ರಸಾರ ಮಾಡಿ ಪ್ರೇಕ್ಷಕರ ಮನಗೆದ್ದು ಮನೆ ಮಾತಾಗಿತ್ತು. ತದನಂತರ ದೇಶದಾದ್ಯಂತ ಇತಿಹಾಸ ಸೃಷ್ಟಿಸಿದ “ಕಾಂತಾರ” ಸಿನಿಮಾವನ್ನು ‘ತುಳು’ ಭಾಷೆಯಲ್ಲಿ ಪ್ರಸಾರಮಾಡಿ ವೀಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ಇದೀಗ ಈ ವರ್ಷದ ಸೂಪರ್ ಹಿಟ್ ತುಳು … Read more

ಕಾವೇರಿ ಕನ್ನಡ ಮೀಡಿಯಂ – ಕನ್ನಡದ ಕಂಪನ್ನು ಪಸರಿಸಲು ಬರ್ತಿದೆ ಹೊಚ್ಚ ಹೊಸ ಧಾರಾವಾಹಿ – ಆಗಸ್ಟ್ 28 ರಿಂದ ರಾತ್ರಿ 7.30 ಕ್ಕೆ.

Kaveri Kannada Medium Serial

ಕನ್ನಡದ ಕಂಪನ್ನು ಪಸರಿಸಲು ಬರ್ತಿದೆ ಹೊಚ್ಚ ಹೊಸ ಧಾರಾವಾಹಿ ಕಾವೇರಿ ಕನ್ನಡ ಮೀಡಿಯಂ ಪ್ರೇಕ್ಷಕರನ್ನು ಸದಾಕಾಲ ಹೊಸತನದೊಂದಿಗೆ ರಂಜಿಸುತ್ತಿರುವ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಶುರುವಾಗಲಿದೆ ಹೊಚ್ಚ ಹೊಸ ವಿನೂತನ ಧಾರಾವಾಹಿ “ಕಾವೇರಿ ಕನ್ನಡ ಮೀಡಿಯಂ”. ಹೆಸರೇ ಹೇಳೋ ತರ ಇದು ಕನ್ನಡದ ಕಂಪು ತುಂಬಿರೋ ಸೀರಿಯಲ್ ಅಂತಾನೆ ಹೇಳಬಹುದು. ಕನ್ನಡ ಬರೀ ಭಾಷೆ ಅಲ್ಲ ಬದುಕು ಅಂತ ನಂಬಿರೋ ಊರಿನಲ್ಲಿ ಹುಟ್ಟಿರೋ ಕಾವೇರಿ ಅನ್ನೋ ಹೆಣ್ಣು ಮಗಳು ವೃತ್ತಿಯಲ್ಲಿ ಶಿಕ್ಷಕಿ, ಅಪ್ಪ ಕಟ್ಟಿರೋ ಕನ್ನಡ ಶಾಲೆಯನ್ನು ಕಾಪಾಡೋದಕ್ಕಾಗಿ … Read more

ಸ್ಟಾರ್ ಸುವರ್ಣ ವಾಹಿನಿಯ ವತಿಯಿಂದ ‘ಲಾಲ್ ಬಾಗ್ ಪುಷ್ಪಪ್ರದರ್ಶನ’ ದಲ್ಲಿ “ಕಾವೇರಿ ಕನ್ನಡ ಮೀಡಿಯಂ” ಧಾರಾವಾಹಿಗೆ ಭರ್ಜರಿ ಪ್ರಮೋಷನ್…!

Kaveri Kannada Medium Serial Promotion

ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಸ್ವಾತಂತ್ಯ ದಿನಾಚರಣೆಯ ಪ್ರಯುಕ್ತ ಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಈ ಬಾರಿ ಕೆಂಗಲ್ ಹನುಮಂತಯ್ಯ ರವರ ಪ್ರತಿಮೆಯನ್ನು ಹೂವಿನಿಂದ ಮಾಡಲಾಗಿದ್ದು, ಜೊತೆಗೆ ಗಾಜಿನ ಮನೆಯ ಕೇಂದ್ರ ಭಾಗದಲ್ಲಿ ನಿರ್ಮಿಸಿರುವ ವಿಧಾನಸೌಧ ಹಾಗು ಶಿವಪುರ ಸತ್ಯಾಗ್ರಹಸೌಧದ ಪುಷ್ಪ ಮಾದರಿ ಪ್ರೇಕ್ಷಕರನ್ನು ಆಕರ್ಷಿಸುತ್ತಿದೆ. ಹೀಗಾಗಿ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಹೊಸದಾಗಿ ಆರಂಭವಾಗಲಿರುವ ‘ಕಾವೇರಿ ಕನ್ನಡ ಮೀಡಿಯಂ’ ಧಾರಾವಾಹಿಯ ಪ್ರಮೋಷನ್ ಅನ್ನು ಭರ್ಜರಿಯಾಗಿ ವಾಹಿನಿಯು ಮಾಡುತ್ತಿದ್ದು ಜನರಿಂದ ಉತ್ತಮ ಪ್ರತಿಕ್ರಿಯೆ ದೊರಕುತ್ತಿದೆ. ಈಗಾಗಲೇ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ನಮ್ಮ ಲಚ್ಚಿ, ಉಧೋ … Read more

ಸ್ವಾತಂತ್ಯ ದಿನಾಚರಣೆಯ ಪ್ರಯುಕ್ತ ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಸೂಪರ್ ಹಿಟ್ ಸಿನಿಮಾ “ಹೊಯ್ಸಳ” | ಇದೇ ಆಗಸ್ಟ್ 13 ರಂದು ಭಾನುವಾರ ಸಂಜೆ 6 ಗಂಟೆಗೆ..!

Gurudev Hoysala Movie Premier

ಪ್ರೇಕ್ಷಕರ ಮನರಂಜನೆಗಾಗಿ ಸದಾಕಾಲ ಹೊಸತನವನ್ನು ನೀಡುತ್ತಿರುವ ಸ್ಟಾರ್ ಸುವರ್ಣ ವಾಹಿನಿಯು ಇದೀಗ ಸುವರ್ಣ ವರ್ಲ್ಡ್ ಪ್ರೀಮಿಯರ್ ಮೂವಿ ನಟ ರಾಕ್ಷಸ ಡಾಲಿ ಧನಂಜಯ್ ಅಭಿನಯದ “ಗುರುದೇವ್ ಹೊಯ್ಸಳ” ಸಿನಿಮಾವನ್ನು ಪ್ರಸಾರ ಮಾಡಲು ಸಜ್ಜಾಗಿದೆ. ಸ್ವಾತಂತ್ಯ ದಿನಾಚರಣೆಯ ಪ್ರಯುಕ್ತ ಈ ಸಿನಿಮಾವು ಕಿರುತೆರೆಯಲ್ಲಿ ರಾರಾಜಿಸಲಿದೆ. ಪಟ್ಟಣದ ಅತ್ಯಂತ ನಿಷ್ಠಾವಂತ ಹಾಗು ಶಕ್ತಿಶಾಲಿ ಪೊಲೀಸ್ ಅಧಿಕಾರಿ ಗುರುದೇವ್ ಹೊಯ್ಸಳ. ರಾಜಕಾರಣಿಗಳು ಹಾಗು ದರೋಡೆಕೋರರಿಂದ ಭೂ ಮಾಫಿಯಾವನ್ನು ತಡೆಗಟ್ಟುವಲ್ಲಿ ಗುರುದೇವ್ ಹೇಗೆ ಯಶಸ್ವಿಯಾಗುತ್ತಾರೆ ಎಂಬುದು ಈ ಸಿನಿಮಾದ ಮುಖ್ಯ ಕಥೆ. ಇನ್ನು … Read more

ಮಾಟಗಾತಿಯ ಕಾಡಿನಲ್ಲಿ – ಸ್ಟಾರ್ ಸುವರ್ಣದಲ್ಲಿ ಬರ್ತಿದೆ 3 ಗಂಟೆಗಳ ವಿಶೇಷ ಸಿನಿಮಾ ರೇಣುಕಾ ಯಲ್ಲಮ್ಮ..ಇದೇ ಭಾನುವಾರ ಸಂಜೆ 6.30 ಕ್ಕೆ..!

Maatagathiya Kadinalli Udho Udho Shri Renuka Yellamma

ಕನ್ನಡ ಕಿರುತೆರೆಯಲ್ಲಿ ಮನರಂಜನೆಯ ವರ್ಷಧಾರೆಯನ್ನೇ ಹರಿಸುತ್ತಿರುವ ಸ್ಟಾರ್ ಸುವರ್ಣ ವಾಹಿನಿಯು ಇದೀಗ ವೀಕ್ಷರಿಗಾಗಿ ವಿಶೇಷ ಚಿತ್ರವೊಂದನ್ನು ಪ್ರಸಾರ ಮಾಡಲು ಸಜ್ಜಾಗಿದೆ. ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ’ ಧಾರಾವಾಹಿಯು ಆರಂಭದಿಂದಲೂ ಪ್ರೇಕ್ಷಕರ ಮನಗೆದ್ದು ಅತೀ ಹೆಚ್ಚು ರೇಟಿಂಗ್ ಪಡೆಯುವ ಮೂಲಕ ಮನೆ ಮನೆಯ ಮಾತಾಗಿದೆ. ಈ ನಿಟ್ಟಿನಲ್ಲಿ ವಾಹಿನಿಯು “ಮಾಟಗಾತಿಯ ಕಾಡಿನಲ್ಲಿ” ರೇಣುಕಾ ಯಲ್ಲಮ್ಮ ಎಂಬ ಶೀರ್ಷಿಕೆಯಡಿ ಸ್ಪೆಷಲ್ ಸಿನಿಮಾವೊಂದನ್ನು ಪ್ರಸಾರಮಾಡುತ್ತಿದೆ. ಕಥೆಯ ಅನುಸಾರ ಆ ಒಂದು ಕಾಡಿನಲ್ಲಿ ಎಷ್ಟೋ ವರ್ಷಗಳಿಂದ ಚಿರಯವ್ವನವನ್ನು … Read more

ಬರ್ತಿದೆ ದ್ವೇಷ ಮರೆಸಿ, ಪ್ರೀತಿ ಹಂಚಲು ಜನ್ಮವೆತ್ತಿದ ನಾಗಕನ್ನಿಕೆಯ ಕಥೆ “ನಾಗಪಂಚಮಿ”..ಇದೇ ಜುಲೈ 31 ರಿಂದ ಮಧ್ಯಾಹ್ನ 1 ಗಂಟೆಗೆ..!

Naga Panchami Serial Star Suvarna

ಕನ್ನಡ ಕಿರುತೆರೆಯಲ್ಲಿ ಮನರಂಜನೆಗೆ ಹೊಸ ಮುನ್ನುಡಿ ಬರೆದ ‘ಸ್ಟಾರ್ ಸುವರ್ಣ’ ವಾಹಿನಿಯು ಇದೀಗ ಪ್ರೇಕ್ಷಕರಿಗೆ ನಾಗಕನ್ನಿಕೆಯ ಕಥೆಯನ್ನು ಹೇಳಲು ಸಜ್ಜಾಗಿದೆ ಅದೇ “ನಾಗಪಂಚಮಿ”. ಅಲೌಕಿಕ ಶಕ್ತಿಯಿಂದಾಗಿ ಶಿವನ ಸನ್ನಿಧಾನದಲ್ಲಿ ಕಥಾನಾಯಕಿ ‘ಪಂಚಮಿ’ ಜನಿಸಿರುತ್ತಾಳೆ. ವಿಚಿತ್ರ ರೀತಿಯಲ್ಲಿ ಜನ್ಮಪಡೆದ ಕಾರಣ ಊರಿನ ಜನ ಪಂಚಮಿಯನ್ನು ಅನಿಷ್ಟವೆಂದು ದೊಷಿಸುತ್ತಿದ್ದರೆ ಪಂಚಮಿ ನಾಗಕನ್ನಿಕೆಯಾಗಿ ಹೇಗೆ ಬದಲಾಗುತ್ತಾಳೆ ಎಂಬುದೇ ಕುತೂಹಲ. ಆಕೆಗೆ ತಿಳಿಯಲಾರದ ಶಕ್ತಿಯೊಂದು ಅವಳ ರೂಪದಲ್ಲಿ ಊರಿನ ಜನರಿಗೆ ಮಾಡುವ ಸಹಾಯ, ಪವಾಡಗಳು ನೋಡುಗರಿಗೆ ಮೈನವಿರೇಳಿಸುವಂತೆ ಮಾಡುತ್ತದೆ. ಇನ್ನು ಕಥಾನಾಯಕ ಮೋಕ್ಷ, … Read more

ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗಲಿದೆ “ರಾಘವೇಂದ್ರ ಸ್ಟೋರ್ಸ್”..ಇದೇ ಭಾನುವಾರ ಜುಲೈ 23 ರಂದು ಸಂಜೆ 6.30 ಕ್ಕೆ..!

Raghavendra Stores Movie Premier

ಪ್ರೇಕ್ಷಕರ ಮನರಂಜನೆಗಾಗಿ ಸದಾಕಾಲ ಹೊಸತನವನ್ನು ನೀಡುತ್ತಾ ಬಂದಿರುವ ಸ್ಟಾರ್ ಸುವರ್ಣ ವಾಹಿನಿಯು ಇದೀಗ ಸುವರ್ಣ ವರ್ಲ್ಡ್ ಪ್ರೀಮಿಯರ್ ಮೂವಿ ನವರಸ ನಾಯಕ ಜಗ್ಗೇಶ್ ಅಭಿನಯದ “ರಾಘವೇಂದ್ರ ಸ್ಟೋರ್ಸ್” ಸಿನಿಮಾವನ್ನು ಪ್ರಸಾರ ಮಾಡಲು ಸಜ್ಜಾಗಿದೆ. ರಾಘವೇಂದ್ರ ಸ್ಟೋರ್ಸ್ ಹೆಸರಿಗೆ ತಕ್ಕಂತೆ ಇದರಲ್ಲಿ ವಿವಿಧ ರೀತಿಯ ಪದಾರ್ಥಗಳನ್ನು ಹೊಂದಿದೆ. ಹಾಸ್ಯ, ತುಂಟತನ, ಶೃಂಗಾರ, ವೇದನೆ ಸೇರಿ ನವರಸಗಳ ಮಿಶ್ರಣವಿಲ್ಲಿದೆ. ತಂದೆ ಗುಂಡ ಭಟ್ಟರ ರಾಘವೇಂದ್ರ ಸ್ಟೋರ್ಸ್ ನಲ್ಲಿ ಅಡುಗೆ ಭಟ್ಟ ಕಂ ಸಪ್ಲೆಯರ್ ಆಗಿರುವ ಬ್ರಹ್ಮಚಾರಿ ಹಯವದನನ ಮದುವೆಯ ಕಥೆಯಿದು. … Read more