ಕನ್ನಡ ಕಿರುತೆರೆ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ “ನಮ್ಮ ಲಚ್ಚಿ” ಧಾರಾವಾಹಿಗೆ ‘ಆಗ್ಮೆಂಟೆಡ್ ರಿಯಾಲಿಟಿ ವಿಡಿಯೋ’ವನ್ನು ಪತ್ರಿಕಾ ಜಾಹಿರಾತಿನಲ್ಲಿ ಬಳಸಿದ ‘ಸ್ಟಾರ್ ಸುವರ್ಣ’

Namma Lachchi Promotions

ಇಂದಿನಿಂದ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಹೊಚ್ಚ ಹೊಸ ಧಾರವಾಹಿ “ನಮ್ಮ ಲಚ್ಚಿ” ಸೋಮ-ಶನಿ ರಾತ್ರಿ 8.00 ಗಂಟೆಗೆ ಪ್ರಸಾರವಾಗುತ್ತಿದೆ. ಸದಾಕಾಲ ಹೊಸತನಕ್ಕೆ ಮೊದಲ ಆದ್ಯತೆ ನೀಡುತ್ತಾ ಬಂದಿರುವ ‘ಸ್ಟಾರ್ ಸುವರ್ಣ’ ಈ ಬಾರಿ “ನಮ್ಮ ಲಚ್ಚಿ” ಧಾರಾವಾಹಿಗೆ ವಿನೂತನ ರೀತಿಯಲ್ಲಿ ಪ್ರಮೋಷನ್ ಮಾಡಿದೆ. ಕನ್ನಡ ಕಿರುತೆರೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಧಾರಾವಾಹಿಯೊಂದಕ್ಕೆ ಆಗ್ಮೆಂಟೆಡ್ ರಿಯಾಲಿಟಿ ವಿಡಿಯೋವನ್ನು ಪತ್ರಿಕಾ ಜಾಹೀರಾತಿಗಾಗಿ ಮಾಡಲಾಗಿದೆ. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಶುರುವಾಗುತ್ತಿರುವ “ನಮ್ಮ ಲಚ್ಚಿ” ಧಾರಾವಾಹಿಯ ಪ್ರಮೋಷನ್ ಗಾಗಿ … Read more

ಸ್ಟಾರ್ ಸುವರ್ಣ ವಾಹಿನಿಯಲ್ಲಿ ಬರ್ತಿದೆ ಹೊಚ್ಚ ಹೊಸ ಧಾರಾವಾಹಿ “ನಮ್ಮ ಲಚ್ಚಿ”..ಇದೇ ಫೆಬ್ರವರಿ 6 ರಿಂದ ರಾತ್ರಿ 8 ಗಂಟೆಗೆ..!

Namma Lachchi Suvarna TV

ಕನ್ನಡಿಗರಿಗೆ ಹೊಸತನದೊಂದಿಗೆ ವಿಭಿನ್ನ ರೀತಿಯ ಧಾರಾವಾಹಿಗಳನ್ನು ನೀಡುತ್ತಾ ಬಂದಿರುವ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಇದೀಗ ಮತ್ತೊಂದು ಹೊಸ ಕಥೆಯೊಂದು ಶುರುವಾಗುತ್ತಿದೆ ಅದೇ “ನಮ್ಮ ಲಚ್ಚಿ”. ಈಗಾಗಲೇ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಎಡೆಯೂರು ಶ್ರೀ ಸಿದ್ದಲಿಂಗೇಶ್ವರ, ಮನಸೆಲ್ಲಾ ನೀನೇ, ಕಥೆಯೊಂದು ಶುರುವಾಗಿದೆ, ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ, ಜೇನುಗೂಡು ಹಾಗೂ ಹೊಂಗನಸು ಧಾರಾವಾಹಿಗಳು ಪ್ರೇಕ್ಷಕರ ಮನಗೆದ್ದು ಮನೆಮನೆಯ ಮಾತಾಗಿದೆ. ಈ ಸಾಲಿಗೆ ಇದೀಗ ‘ನಮ್ಮ ಲಚ್ಚಿ’ ಎಂಬ ಹೊಸ ಕಥೆಯೊಂದು ಸೇರ್ಪಡೆಯಾಗಲಿದೆ. ಹಳ್ಳಿಯಲ್ಲಿ ಬೆಳೆದಿರೋ ಪುಟ್ಟ … Read more

ಕಾಂತಾರ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಇತಿಹಾಸ ಸೃಷ್ಟಿಸಿದೆ

ಭಾರತದಲ್ಲೇ ಹೊಸ ಇತಿಹಾಸ ಸೃಷ್ಟಿಸಿರುವ ಕನ್ನಡದ ಹೆಮ್ಮೆ ‘ಕಾಂತಾರ’ ಸಿನಿಮಾ ಇದೀಗ ಕಿರುತೆಯಲ್ಲಿ ಮತ್ತೊಂದು ದಾಖಲೆಯನ್ನು ಸೃಷ್ಟಿಸಿದೆ . ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾದ ಸುವರ್ಣ ವರ್ಲ್ಡ್ ಪ್ರೀಮಿಯರ್ ಮೂವಿ ‘ಕಾಂತಾರ’ ಅತೀ ಹೆಚ್ಚು ರೇಟಿಂಗ್ ಗಳಿಸುವ ಮೂಲಕ ಸ್ಟಾರ್ ಸುವರ್ಣದಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಅಭಿನಯದ ಕಾಂತಾರ ಸಿನಿಮಾ ಪ್ರೇಕ್ಷಕರ ಮನ ಗೆದ್ದಿದ್ದು, ಸ್ಟಾರ್ ಸುವರ್ಣ SD ಹಾಗೂ HD ಸೇರಿ ಬರೋಬ್ಬರಿ 15.8 … Read more

ಸವದತ್ತಿಯಲ್ಲಿ ‘ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ’ ಧಾರಾವಾಹಿ ವಾಹನಕ್ಕೆ ಚಾಲನೆ..

Renuka Yellamma Serial Promotions

ಕನ್ನಡ ಕಿರುತೆರೆಗೆ ಹಲವಾರು ಮಹತ್ವದ ಪೌರಾಣಿಕ ಧಾರಾವಾಹಿಗಳನ್ನು ನೀಡಿ ವೀಕ್ಷಕರ ಮನಗೆದ್ದಿರುವ ಸ್ಟಾರ್ ಸುವರ್ಣ ವಾಹಿನಿಯು ಇದೀಗ ಮತ್ತೊಮ್ಮೆ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯ, ರಾಷ್ಟ್ರದ ಹಲವಾರು ಭಾಗಳಲ್ಲಿ ಭಕ್ತರನ್ನು ಹೊಂದಿರುವ ಶ್ರೀರೇಣುಕಾ ಯಲ್ಲಮ್ಮ ಮಹ್ಮಾತೆಯ ಕುರಿತಾದ ‘ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ’ ಧಾರಾವಾಹಿಯನ್ನು ಇದೇ ಜನವರಿ 23 ರಿಂದ ಪ್ರಸಾರ ಮಾಡಲಿದೆ. ಈ ಧಾರಾವಾಹಿಯ ಪ್ರಸಾರಕ್ಕೂ ಮುನ್ನ ಈ ದೇವಿಯ ದರ್ಶನವನ್ನು ರಾಜ್ಯಾದ್ಯಂತ ಭಕ್ತರಿಗೆ ಮಾಡಿಸುವ ಉದ್ದೇಶದಿಂದ ವಾಹಿನಿ ಹಮ್ಮಿಕೊಂಡಿದ್ದ “ಟೆಂಪಲ್ ಆನ್ ವೀಲ್ಸ್” … Read more

ನಿಮ್ಮ ಮನೆ ಮನದಂಗಳಕ್ಕೆ ಬರ್ತಿದೆ ಕರುನಾಡಿನ ಶಕ್ತಿ ದೇವತೆ “ರೇಣುಕಾ-ಯಲ್ಲಮ್ಮನ” ಮಹಾಚರಿತೆ…! ಜನವರಿ 23 ರಿಂದ ರಾತ್ರಿ 8.30 ಕ್ಕೆ.

Udho Udho Sri Renuka Yallamma

ಕನ್ನಡ ಕಿರುತೆರೆ ವೀಕ್ಷಕರಿಗೆ ಎಡೆಯೂರು ಶ್ರೀ ಸಿದ್ದಲಿಂಗೇಶ್ವರ, ಹರ ಹರ ಮಹಾದೇವ, ಮಹಾಭಾರತ, ರಾಧಾಕೃಷ್ಣ ಹಾಗು ಸೀತೆಯ ರಾಮ ಧಾರಾವಾಹಿಗಳಂತಹ ಪುರಾಣ, ಆಧ್ಯಾತ್ಮ ಮತ್ತು ಮೌಲ್ಯಾಧಾರಿತ ಧಾರಾವಾಹಿಗಳನ್ನು ನೀಡಿರುವ ಸ್ಟಾರ್‌ ಸುವರ್ಣ ವಾಹಿನಿಯು ಇದೀಗ ಹೊಸ ವರ್ಷದ ಪ್ರಯುಕ್ತ ಪ್ರೇಕ್ಷಕರಿಗೆ ಕನ್ನಡ ಮಣ್ಣಿನ ಸೊಗಡಿನ ಕಥೆಯನ್ನೊಂದು ಪ್ರಸ್ತುತಪಡಿಸುತ್ತಿದೆ ಅದೇ “ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ”. ಶತಮಾನಗಳ ಹಿಂದೆ ಒಮ್ಮೆ ಸುದರ್ಶನ ಚಕ್ರವು ಅಹಂಕಾರದಿಂದ ಮೆರೆದಾಗ, ಭೂಲೋಕದಲ್ಲಿ ಮಾನವನ ರೂಪದಲ್ಲಿ ಜನ್ಮ ತಾಳುವಂತೆ ಭಗವಂತ ಶ್ರೀ ವಿಷ್ಣುವು … Read more

ಸ್ಟಾರ್ ಸುವರ್ಣದಲ್ಲಿ “ಕಾಂತಾರ”.. ಮರಳಿನಲ್ಲಿ ಮೂಡಿದ ಸ್ಯಾಂಡ್ ಆರ್ಟ್…!

sand sculpture work Kantara

ದೇಶ-ವಿದೇಶಗಳಲ್ಲಿ ಸದ್ದು ಮಾಡಿದ ಕನ್ನಡದ ಹೆಮ್ಮೆಯ ಸಿನಿಮಾ “ಕಾಂತಾರ” ಇದೀಗ ಕಿರುತೆರೆಯಲ್ಲಿ ಮಿಂಚಲು ಸಜ್ಜಾಗಿದೆ. ಕನ್ನಡದ ಜನಪ್ರಿಯ ವಾಹಿನಿ ಸ್ಟಾರ್ ಸುವರ್ಣದಲ್ಲಿ ಇಂದು ಸಂಜೆ 6 ಗಂಟೆಗೆ ಸುವರ್ಣ ವರ್ಲ್ಡ್ ಪ್ರೀಮಿಯರ್ ಮೂವಿ ‘ಕಾಂತಾರ’ ಪ್ರಸಾರವಾಗಲಿದೆ. ಈಗಾಗಲೇ ಯಶಸ್ವಿ 100 ದಿನಗಳ ಪೂರೈಸಿರುವ ಕಾಂತಾರ ಇದೀಗ ಕಿರುತೆರೆಯಲ್ಲಿ ಪ್ರಸಾರವಾಗಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಸ್ಯಾಂಡ್ ಹಾರ್ಟ್ ಕಲಾವಿದರಾದ ಹರೀಶ್ ಆಚಾರ್ಯ ರವರು ಅದ್ಭುತವಾದ ಮರಳುಶಿಲ್ಪ ಕೃತಿಯನ್ನು ರಚಿಸಿದ್ದಾರೆ. ಮಂಗಳೂರಿನ ತಣ್ಣೀರುಬಾವಿ ಕಡಲ ತೀರದ ಮರಳುರಾಶಿಯಲ್ಲಿ ‘ಕಾಂತಾರ’ … Read more

ಸುವರ್ಣ ಸಂಕ್ರಾಂತಿ ಸಂಭ್ರಮ – ದಲ್ಲಿ ಸ್ಯಾಂಡಲ್ ವುಡ್ ತಾರೆಯರ ಸಮಾಗಮ…ಇದೇ ಭಾನುವಾರ ಮಧ್ಯಾಹ್ನ 3 ಗಂಟೆಗೆ…!

Suvarna Sankranti Celebration

ಹೊಸ ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಅದ್ದೂರಿಯಾಗಿ ಆಚರಿಸಿದ ಸ್ಟಾರ್ ಸುವರ್ಣ. ಸಾಮಾನ್ಯವಾಗಿ ಸಂಕ್ರಾಂತಿ ಹಬ್ಬದ ದಿನದಂದು ಎಳ್ಳು ಬೆಲ್ಲ, ನೆಲಗಡಲೆ, ಸಕ್ಕರೆ ಅಚ್ಚು, ಕೊಬ್ಬರಿ, ಕಬ್ಬು ಬೆರೆಸಿದ ವಿಶೇಷ ಸಿಹಿಯನ್ನು ದೇವರಿಗೆ ನೈವೇದ್ಯ ಮಾಡಿ ನಂತರ ತಮ್ಮ ಆಪ್ತರೇಷ್ಟರಿಗೆ ಹಂಚಿ ಸಂತೋಷವನ್ನು ಪಡುತ್ತಾರೆ. ಹೀಗಾಗಿ ಸ್ಟಾರ್ ಸುವರ್ಣ ವಾಹಿನಿಯು ಈ ವರ್ಷದ ಸಂಕ್ರಾಂತಿ ಹಬ್ಬದ ಪ್ರಯುಕ್ತ “ಸುವರ್ಣ ಸಂಕ್ರಾಂತಿ ಸಂಭ್ರಮ” ಎಂಬ ಅದ್ದೂರಿ ಕಾರ್ಯಕ್ರಮವನ್ನು ಆಯೋಜಿಸಿದ್ದು. ಈ ಕಾರ್ಯಕ್ರಮದಲ್ಲಿ ಅನುಪಮಾ ಗೌಡ, ಅದಿತಿ ಪ್ರಭುದೇವ್ ,ಡಾಲಿ … Read more

ಇದೇ ಜನವರಿ 15 ರಂದು ಸಂಜೆ 6 ಗಂಟೆಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ನಿಮ್ಮ ಸ್ಟಾರ್ ಸುವರ್ಣದಲ್ಲಿ ಬರ್ತಿದೆ ಜಗಮೆಚ್ಚಿದ “ಕಾಂತಾರ”..!

Kantara Movie Premier

2022ರಲ್ಲಿ ಇಡೀ ದೇಶವೇ ಸ್ಯಾಂಡಲ್ವುಡ್ ನತ್ತ ತಿರುಗಿನೋಡುವಂತೆ ಮಾಡಿ, ಇತಿಹಾಸ ಸೃಷ್ಟಿಸಿದ ಕನ್ನಡದ ಹೆಮ್ಮೆಯ ಸಿನಿಮಾ “ಕಾಂತಾರ” ಇದೀಗ ನಿಮ್ಮ ಸ್ಟಾರ್ ಸುವರ್ಣ ವಾಹಿನಿಯಲ್ಲಿ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಆಗಲಿದೆ. ಈಗಾಗಲೇ ಸ್ಟಾರ್ ಸುವರ್ಣ ವಾಹಿನಿಯು ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ನೀಡುತ್ತಿದ್ದು ಎಡೆಯೂರು ಶ್ರೀ ಸಿದ್ದಲಿಂಗೇಶ್ವರ, ಮನಸೆಲ್ಲಾ ನೀನೇ, ಕಥೆಯೊಂದು ಶುರುವಾಗಿದೆ, ಹೊಂಗನಸು, ಸುವರ್ಣ ಸೂಪರ್ ಸ್ಟಾರ್ ಪ್ರೇಕ್ಷಕರ ಮನಗೆದ್ದು ಮನೆಮಾತಾಗಿದೆ. ಅಷ್ಟೇ ಅಲ್ಲದೆ ವಾಹಿನಿಯಲ್ಲಿರುವ ಜೇಮ್ಸ್, ಲಕ್ಕಿಮ್ಯಾನ್, RRR ನಂತಹ ಸೂಪರ್ ಹಿಟ್ ಸಿನಿಮಾಗಳ ಸಾಲಿಗೆ … Read more

ಮರಳಿ ಮನಸಾಗಿದೆ ಧಾರಾವಾಹಿಯಲ್ಲಿ ಶಮಂತ್ ಆಗಮನ

Marali Manasagide

ವಿಕ್ರಾಂತ್ ಸ್ಪಂದನಾಳನ್ನು ವಿಹಾರಕ್ಕೆ ಕರೆದುಕೊಂಡು ಹೋಗಿ ಅವಳ ಮೇಲಿರುವ ಪ್ರೀತಿಯನ್ನು ನಿವೇದಿಸಿಕೊಳ್ಳಲು ನಿರ್ಧರಿಸುತ್ತಾನೆ. ಸ್ಪಂದನಾಳನ್ನು ಮನವೊಲಿಸಿ, ಇದು ತೀರ್ಥಹಳ್ಳಿಯಲ್ಲಿ ನಡೆಯುವ ಅಧಿಕೃತ ಕಾರ್ಯಕ್ರಮ ಕಡ್ಡಾಯವಾಗಿ ಹಾಜರಾಗಬೇಕು ಎಂದು ಹೇಳಿ ವಿಕ್ರಾಂತ್ ಅವಳನ್ನು ಯಾಮಾರಿಸಿ ಕರೆದುಕೊಂಡು ಹೋಗುತ್ತಾನೆ. ನಂತರ ವಿಕ್ರಾಂತ್ ಹೇಳಿರೋದೆಲ್ಲಾ ಸುಳ್ಳು ಎಂದು ಅರಿವಾಗಿ ಕೋಪಗೊಂಡ ಸ್ಪಂದನ ಹೊಗಬೇಕಾಗಿದ್ದ ದಾರಿಯನ್ನು ಮರೆತು ಅಕ್ರಮ ಚಟುವಟಿಕೆಯ ಕೇಂದ್ರವಾಗಿರುವ ಅಪರಿಚಿತ ಸ್ಥಳಕ್ಕೆ ಬಂದು ತಲುಪುತ್ತಾಳೆ. ಅಲ್ಲಿ ಸ್ಪಂದನಾಳನ್ನು ಗೂಂಡಾಗಳು ಬೆನ್ನಟ್ಟುತ್ತಾರೆ ಆದರೆ ಒಬ್ಬ ವ್ಯಕ್ತಿ ಆಕೆಯನ್ನು ರಕ್ಷಿಸುತ್ತಾನೆ. ತದನಂತರ ಆ … Read more

‘ಕಥೆಯೊಂದು ಶುರುವಾಗಿದೆ’ ಧಾರಾವಾಹಿ ಕಾಂಟೆಸ್ಟ್ ವಿನ್ನರ್ಸ್ ಗೆ “43 ಇಂಚಿನ LED TV” ವಿತರಣೆ..!

Winners Of Suvarna Golden Number

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ವಿಭಿನ್ನ ರೀತಿಯ ವಿಶಿಷ್ಟ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ಪ್ರೇಕ್ಷಕರ ಮನಗೆದ್ದಿದೆ. ಕಳೆದ ನವೆಂಬರ್ 28 ರಂದು ವಾಹಿನಿಯು “ಕಥೆಯೊಂದು ಶುರುವಾಗಿದೆ” ಎಂಬ ಹೊಚ್ಚ ಹೊಸ ಧಾರಾವಾಹಿಯನ್ನು ಪ್ರಸಾರ ಮಾಡಲು ಆರಂಭಿಸಿತ್ತು. ಹೀಗಾಗಿ ಸ್ಟಾರ್ ಸುವರ್ಣ ವಾಹಿನಿಯು ವೀಕ್ಷಕರಿಗೊಂದು “Golden ನಂಬರ್” ಎಂಬ ಕಾಂಟೆಸ್ಟ್ ಅನ್ನು ಆಯೋಜಿಸಿತ್ತು. 6 ದಿನಗಳ ಕಾಲ “ಕಥೆಯೊಂದು ಶುರುವಾಗಿದೆ” ಧಾರಾವಾಹಿ ಸಂಚಿಕೆಯ ಕೊನೆಯಲ್ಲಿ ಕೇಳುವ ಪ್ರಶ್ನೆಗಳಿಗೆ ಉತ್ತರಿಸಿ “43 ಇಂಚಿನ LED TV” ಯನ್ನು ಬಹುಮಾನವಾಗಿ … Read more