ಜೀ ಕನ್ನಡ ಚಾನೆಲ್

ಜೀ ಕನ್ನಡ ಕುಟುಂಬದ ರಥ ,ಬರುತ್ತಿದೆ ನಿಮ್ಮೂರಿನತ್ತ !

ಜಾಹೀರಾತುಗಳು

ಜೀ ಕನ್ನಡ ಚಾನೆಲ್ – ನಿಮ್ಮೂರಿನತ್ತ ಜೀ ಕನ್ನಡ ಕುಟುಂಬದ ರಥ, Zee5 ನಲ್ಲಿ ಮಾಡಿ ಮತ !

Karnataka Television Awards
Karnataka Television Awards

15 ವರ್ಷಗಳ ಯಶಸ್ಸಿನ ಸಂಭ್ರಮದಲ್ಲಿರುವ ಜೀ ಕನ್ನಡ ವಾಹಿನಿ ತನ್ನ ಕುಟುಂಬದ ಅತ್ಯಂತ ದೊಡ್ಡ ಹಬ್ಬವಾದ “ಜೀ ಕುಟುಂಬ ಅವಾರ್ಡ್ಸ್ 2021” ಕಾರ್ಯಕ್ರಮಕ್ಕೆ ಜಿ೫ ಆಪ್ ಆಪ್ ಮೂಲಕ ಡಿಜಿಟಲ್ ಮತದಾನ ಮಾಡಿಸಲು ಜೀ ಕುಟುಂಬ ರಥಕ್ಕೆ ಅದ್ಧೂರಿಯಾಗಿ ಚಾಲನೆ ನೀಡಿದೆ.

ಜೀ ಕನ್ನಡದ ಪ್ರಮುಖರು ಮತ್ತು ಅನೇಕ ಗಣ್ಯರು ಈ ಶುಭ ಸಂದರ್ಭದಲ್ಲಿ ಉಪಸ್ಥಿತರಾಗಿದ್ದು ಉದ್ಘಾಟನಾ ಬಾವುಟ ಹಾರಿಸಿ ಜೀ ಕುಟುಂಬದ ರಥಕ್ಕೆ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸುವ ಈ ವಾಹನ ಜೀ ಕನ್ನಡದಲ್ಲಿ ಪ್ರಸಾರವಾಗುವ ಎಲ್ಲಾ ವರ್ಗವೂ ಮೆಚ್ಚಿರುವ ವೈವಿಧ್ಯಮಯ ಮನರಂಜನಾ ಕಾರ್ಯಕ್ರಮಗಳು,ಕುಟುಂಬದ ಕಲಾವಿದರ ಬಗ್ಗೆ ವೀಕ್ಷಕರಿಂದಲೇ Zee5 App ಮೂಲಕ ಡಿಜಿಟಲ್ ವೋಟಿಂಗ್ ಪಡೆಯಲು ಉತ್ತೇಜಿಸುತ್ತದೆ. ಅತಿಶೀಘ್ರದಲ್ಲೇ ಜೀ ಕನ್ನಡ ಕುಟುಂಬ ಅವಾರ್ಡ್ಸ್ 2021 ಕಾರ್ಯಕ್ರಮ ಪ್ರಸಾರವಾಗಲಿದೆ.

ಜಾಹೀರಾತುಗಳು

“ಜೀ ಕುಟುಂಬ ಅವಾರ್ಡ್ಸ್” ವರ್ಷದಿಂದ ವರ್ಷಕ್ಕೆ ತನ್ನ ಹಿರಿಮೆಯನ್ನು ಹೆಚ್ಚಿಸಿಕೊಂಡು ಕನ್ನಡ ಕಿರುತೆರೆ ವೀಕ್ಷಕರು ಕಾತುರದಿಂದ ನಿರೀಕ್ಷಿಸುವ ಅತ್ಯಂತ ಜನಪ್ರಿಯ ಕಾರ್ಯಕ್ರಮವಾಗಿದೆ. ತಮ್ಮ ಪ್ರತಿಭೆಯಿಂದ ವೀಕ್ಷಕರನ್ನು ರಂಜಿಸುತ್ತಿರುವ ಕುಟುಂಬದ ತಾರೆಯರನ್ನು, ತಂತ್ರಜ್ಞರನ್ನು ಮತ್ತು ಹಲವು ವಿಭಾಗದ ಶ್ರಮಿಕರನ್ನು ಗೌರವಿಸುವುದು ಜೀ ಕನ್ನಡ ವಾಹಿನಿಗೆ ಹೆಮ್ಮೆಯ ವಿಷಯವಾಗಿದೆ. ಈ ವರ್ಷದ ವಿಶೇಷವೆಂದರೆ ಕುಟುಂಬ ಅವಾರ್ಡ್ಸ್ ಪುರಸ್ಕೃತರನ್ನು Zee5 App ನಲ್ಲಿ Vote ಮಾಡುವ ಮೂಲಕ ಆಯ್ಕೆ ಮಾಡಲು ಡಿಜಿಟಲ್ ಮತದಾನದ ವಾಹನಕ್ಕೆ ಚಾಲನೆ ನೀಡಿರುವುದು ನಮಗೆ ಬಹಳ ಸಂತೋಷವಾಗಿದೆ. ಜೀ ಕನ್ನಡದ ಎಲ್ಲಾ ಕಾರ್ಯಕ್ರಮಗಳಿಗೆ ಅಭೂತಪೂರ್ವ ಬೆಂಬಲ ನೀಡುತ್ತಾ ಕರ್ನಾಟಕದ ಜನತೆ ನಮ್ಮನ್ನು ನಂ 1 ಸ್ಥಾನದಲ್ಲಿ ಮೆರೆಸುತ್ತಿದ್ದಾರೆ. ಕನ್ನಡಿಗರು ಈ ವರ್ಷ ಅವರ ನೆಚ್ಚಿನ ಕಲಾವಿದರು,ತಂತ್ರಜ್ಞರನ್ನು ಡಿಜಿಟಲ್ ಮತದಾನದ ಮೂಲಕ ಆಯ್ಕೆ ಮಾಡಿ ನಮ್ಮೊಂದಿಗೆ ಸಂಭ್ರಮಗಳನ್ನು ಸಂಭ್ರಮಿಸಲಿ.

ರಾಘವೇಂದ್ರ ಹುಣಸೂರು ಮುಖ್ಯಸ್ಥರು ಜೀ ಕನ್ನಡ ಮತ್ತು ಜೀ ಪಿಚ್ಚರ್ ವಾಹಿನಿ

Recent Posts

ಸಲಾರ್ , ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಬ್ಲಾಕ್ ಬಸ್ಟರ್ ಸಿನಿಮಾ ನೋಡುಗರಿಗೆ ಬೈಕ್ ಗೆಲ್ಲುವ ಅವಕಾಶ…ಇದೇ ಭಾನುವಾರ ರಾತ್ರಿ 7 ಗಂಟೆಗೆ..!

ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…

44 mins ago

ಹೊಸ ಅವತಾರದಲ್ಲಿ ಬರುತಿದೆ ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್

ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…

6 hours ago

ಬೊಂಬಾಟ್ ಭೋಜನದಲ್ಲಿ “ರಾಮನವಮಿ” ವಿಶೇಷ ಸಂಚಿಕೆಯು ಇದೇ ಬುಧವಾರ ಮಧ್ಯಾಹ್ನ 12 ಗಂಟೆಗೆ

ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…

1 week ago

ಬೊಂಬಾಟ್ ಭೋಜನ’ದಲ್ಲಿ ಯುಗಾದಿ ಸಂಭ್ರಮ….ಹಬ್ಬದೂಟಕ್ಕೆ ಆಗಮಿಸಿದ ಸ್ಯಾಂಡಲ್ವುಡ್ ಸ್ಟಾರ್ಸ್..!

ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…

2 weeks ago

ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯಲ್ಲಿ ‘ವರಲಕ್ಷ್ಮಿ ಕಲ್ಯಾಣ’ , ಮಹಾ ತಿರುವುಗಳುಳ್ಳ ಸಂಚಿಕೆಗಳು ಇದೇ ಸೋಮ-ಶನಿ ಸಂಜೆ 6.30 ಕ್ಕೆ.

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಮನರಂಜನೆಗೆ ಹೊಸ ಆಯಾಮ ನೀಡುತ್ತಾ ಬಂದಿದೆ. ಪ್ರಸ್ತುತ 'ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯು…

3 weeks ago

ಶ್ರೀ ಬ್ರಾಹ್ಮೀ ಹೊಸ ಕಥೆಯ ಶ್ರಾವಣಿ ಸುಬ್ರಮಣ್ಯ ಜೀ಼ ಕನ್ನಡದಲ್ಲಿ ಶುಭಾರಂಭ ಮಾರ್ಚ್‌ 18ರಿಂದ ಮಹಾಮನೋರಂಜನೆಗೆ ಮುನ್ನುಡಿ

ಮನೋರಂಜನೆಯ ಮಾತು ಬಂದಾಗಲೆಲ್ಲ ಎಲ್ಲಾ ಮನೆಯ ಟಿವಿಯು ಟ್ಯೂನ್‌ ಆಗೋದೇ ಜೀ಼ ಕನ್ನಡಕ್ಕೆ. ಕರುನಾಡನ್ನ ದಶಕಗಳಿಂದ ಮನೋರಂಜಿಸುತ್ತ ಬಂದಿರುವ ಜೀ಼…

1 month ago