ಜೀ ಪಿಚ್ಚರ್ , ಕನ್ನಡ ಪಿಚ್ಚರ್ ಪ್ರಪಂಚಕ್ಕೆ 3 ವರ್ಷದ ಹಿಂದೆ ಕಾಲಿಟ್ಟು ಇಂದು ತನ್ನ ಯಶಸ್ಸಿನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿರುವ ವಾಹಿನಿ. ಕಿರುತೆರೆಯ ನಂಬರ್ 1 ಮನರಂಜನಾ ವಾಹಿನಿ ಜೀ ಕನ್ನಡದ ಭಾಗವಾಗಿರುವ ಜೀ ಪಿಚ್ಚರ್ 3ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ .
ಹಲವು ಪೈಪೋಟಿಗಳ ನಡುವೆ ಅತಿ ಕಡಿಮೆ ಅವಧಿಯಲ್ಲೇ ವೀಕ್ಷಕರಿಗೆ ಹತ್ತಿರವಾಗಿರುವ ವಾಹಿನಿ ವಿಭಿನ್ನ , ವಿಶಿಷ್ಟ ಸಿನಿಮಾಗಳ ಮೂಲಕ ಹಿಟ್ ದಿನದ ಫೀಲಿಂಗ್ ನೀಡುತ್ತಿದೆ ಎನ್ನುವುದು ಕನ್ನಡಿಗರ ಅಭಿಪ್ರಾಯವಾಗಿದೆ .
ದಿನದಿಂದ ದಿನಕ್ಕೆ ಅತಿಹೆಚ್ಚು ಜಿಆರ್ ಪಿ ಗಳಿಸುತ್ತಿರುವ ಜೀ ಪಿಚ್ಚರ್ ನಂಬರ್ 1 ಸ್ಥಾನದತ್ತ ಹೆಜ್ಜೆ ಇಡುತ್ತಿದೆ. ಕೇವಲ ಸಿನಿಮಾಗಷ್ಟೇ ಸೀಮಿತವಾಗಿರದ ವಾಹಿನಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನೇತೃತ್ವದಲ್ಲಿ ನಡೆದ ಕನ್ನಡ ಚಲನಚಿತ್ರ ಕಪ್ ಕ್ರಿಕೆಟ್ ಟೂರ್ನಮೆಂಟ್ ನೇರ ಪ್ರಸಾರ ಮಾಡುವುದರೊಂದಿಗೆ ಚಿತ್ರರಂಗದೊಂದಿಗೆ ತನಗಿರುವ ನಂಟನ್ನು ಗಟ್ಟಿಗೊಳಿಸಿಕೊಂಡಿದೆ .
ಅಷ್ಟೇ ಅಲ್ಲದೆ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಮುಖಾಂತರ ಸಿನಿರಸಿಕರ ಗಮನ ಸೆಳೆಯುತ್ತಿದೆ ಮತ್ತು ಅತ್ಯುತ್ತಮ ಗುಣಮಟ್ಟದ ಡಬ್ಬಿಂಗ್ ಸಿನಿಮಾಗಳನ್ನು ಪ್ರಸಾರ ಮಾಡುತ್ತಲೇ ನೋಡುಗರಿಗೆ ಹಿಟ್ ದಿನದ ಫೀಲಿಂಗ್ ನೀಡುವಲ್ಲಿ ಯಶಸ್ವಿಯಾಗಿದೆ.
ಈ ಅಭೂತಪೂರ್ವ ಯಶಸ್ಸು ನೀಡಿರುವ ಕನ್ನಡಿಗರು ಸಿನಿಮಾ ಪ್ರೇಮಿಗಳಿಗೆ ಈ ಮೂಲಕ ಧನ್ಯವಾದ ತಿಳಿಸುತ್ತಿದ್ದು ಇದೀಗ ವಾಹಿನಿ ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದು ಸನ್ ಡೈರೆಕ್ಟ್ ಎಲ್ ಸಿ ಎನ್ ನಂಬರ್ 280 ನಲ್ಲೂ ಲಭ್ಯವಿದೆ. ಇನ್ನು ಮುಂದೆ ಅದೇ ಪ್ರೀತಿ , ವಿಶ್ವಾಸದಿಂದ ಹಾರೈಸುತ್ತಾರೆ ಎಂದು ವಾಹಿನಿಯ ಆಶಯ ವ್ಯಕ್ತಪಡಿಸಿದೆ. ವೀಕ್ಷಕರ ಪರವಾಗಿ ಜೀ ಪಿಚ್ಚರ್ ಗೆ 3ನೇ ವಾರ್ಷಿಕೋತ್ಸವ ಶುಭಾಶಯಗಳು.
ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…
ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…
ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಮನರಂಜನೆಗೆ ಹೊಸ ಆಯಾಮ ನೀಡುತ್ತಾ ಬಂದಿದೆ. ಪ್ರಸ್ತುತ 'ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯು…
ಮನೋರಂಜನೆಯ ಮಾತು ಬಂದಾಗಲೆಲ್ಲ ಎಲ್ಲಾ ಮನೆಯ ಟಿವಿಯು ಟ್ಯೂನ್ ಆಗೋದೇ ಜೀ಼ ಕನ್ನಡಕ್ಕೆ. ಕರುನಾಡನ್ನ ದಶಕಗಳಿಂದ ಮನೋರಂಜಿಸುತ್ತ ಬಂದಿರುವ ಜೀ಼…
ಉದಯ ಟಿವಿ - ಸೂರ್ಯವಂಶ ಕನ್ನಡ ಟೆಲಿವಿಷನ್ ಕ್ಷೇತ್ರದ ತಾಯಿಬೇರಿನಂತಿರುವ ಉದಯ ಟಿವಿ ತನ್ನ ವಿಭಿನ್ನ ಧಾರಾವಾಹಿಗಳ ಮೂಲಕ ವೀಕ್ಷಕರಿಗೆ…
ಜೀ ಕನ್ನಡ ಚಾನೆಲ್ - ನಾರಿ ಕುಲಕ್ಕೆ ನಮಿಸಿದ ಜೀ಼ ಸ್ತ್ರೀ ಅವಾರ್ಡ್ ಹೆಮ್ಮೆಯ ಕನ್ನಡಿಗ, ಜೀ಼ ಕುಟುಂಬದಂತಹ ಪ್ರತಿಷ್ಟಿತ…